News Karnataka Kannada
Thursday, May 02 2024
ಬೆಂಗಳೂರು ನಗರ

ವಿದ್ಯುತ್ ದರ ಪರಿಷ್ಕರಣೆ ವಿಚಾರಕ್ಕೆ ಇಂದು ತಾರ್ಕಿಕ ಅಂತ್ಯ: ಸಿಎಂ ಮಹತ್ವದ ಸಭೆ

Cm Bommai
Photo Credit :

ಬೆಂಗಳೂರು : ಕಳೆದ ನಾಲ್ಕೈದು ತಿಂಗಳಿಂದ ಚರ್ಚೆಯಲ್ಲಿರುವ ವಿದ್ಯುತ್ ದರ ಪರಿಷ್ಕರಣೆ ವಿಚಾರಕ್ಕೆ ಇಂದು ತಾರ್ಕಿಕ ಅಂತ್ಯ ಸಿಗುವ ಸಾಧ್ಯತೆ ಇದ್ದು, ಏಪ್ರಿಲ್ ಮಧ್ಯಭಾಗದಲ್ಲಿ ಬೆಲೆ ಹೆಚ್ಚಳದ ನಿರೀಕ್ಷೆಯಿದೆ.

ಸಿಎಂ ಬಸವರಾಜ್ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಸೋಮವಾರ ಬೆಳಗ್ಗೆ 10 ಗಂಟೆಗೆ ಕೆಇಆರ್ಸಿ ಸಭೆ ನಿಗದಿಯಾಗಿದೆ. ಈ ಸಭೆಯಲ್ಲಿ ವಿದ್ಯುತ್ ಪರಿಷ್ಕರಣೆಗೆ ಸಂಬಂಧಪಟ್ಡ ಅಂತಿಮ ಹಂತದ ಚರ್ಚೆಗಳು ನಡೆಯುತ್ತವೆ ಎಂದು ತಿಳಿದು ಬಂದಿದೆ.

ಕೃಷಿ, ಕೈಗಾರಿಕೆ, ವಾಣಿಜ್ಯ ಹಾಗೂ ಗೃಹ ಬಳಕೆ ವಿದ್ಯುತ್ ದರ ಪರಿಷ್ಕರಣೆಗೆ ಸಂಬಂಧಪಟ್ಟಂತೆ ಕೆಪಿಟಿಸಿಎಲ್ ನ ಐದು ಕಂಪನಿಗಳು ಈಗಾಗಲೇ ಸರಕಾರಕ್ಕೆ ತಮ್ಮ ಶಿಫಾರಸ್ಸನ್ನು ನೀಡಿದೆ. ಬೆಲೆ ಏರಿಕೆ ಅನಿವಾರ್ಯ ಎಂದು ಸರಕಾರ ಈಗಾಗಲೇ ಸ್ಪಷ್ಡಪಡಿಸಿದೆ.

ಈ ಮಧ್ಯೆ ಕೆಇಆರ್ ಸಿ ಆಧ್ಯಕ್ಷರ ಆಯ್ಕೆಗೂ ಸರ್ಕಸ್ ನಡೆಯುತ್ತಿದೆ. ರಾಜ್ಯದ ಮುಖ್ಯಕಾರ್ಯದರ್ಶಿ ರವಿಕುಮಾರ್ ಈ ಹುದ್ದೆ ಬಯಸಿ ಅರ್ಜಿ ಸಲ್ಲಿಸಿದ್ದು, ಆಯ್ಕೆ ಸಮಿತಿಯಿಂದ ಹೊರ ಬಂದಿದ್ದಾರೆ. ಇನ್ನು ಕೆಲವೇ ದಿನಗಳಲ್ಲಿ ಈ ಎರಡು ವಿಚಾರಗಳು ಬಗೆಹರಿಯಲಿವೆ ಎಂದು ಸಿಎಂ‌ ಕಚೇರಿ‌ ಮೂಲಗಳು ತಿಳಿಸಿವೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು