ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಕ್ಟೋಬರ್ 30 ರಂದು ಉಪಚುನಾವಣೆ ನಡೆಯಲಿದ್ದು, ನಾಮಪತ್ರ ಸಲ್ಲಿಕೆಗೆ ಅಕ್ಟೋಬರ್ 8 ಅಂತಿಮ ದಿನವಾಗಿದೆ. ಹೀಗಾಗಿ ಸ್ಥಳೀಯ ನಾಯಕರೊಂದಿಗೆ ಮಾತುಕತೆ ನಡೆಸಿದ ಬಳಿಕ ಅಭ್ಯರ್ಥಿಗಳ ಪಟ್ಟಿಯನ್ನು ಹೈಕಮಾಂಡ್’ಗೆ ಕಳುಹಿಸಲಾಗಿದ್ದು, ಅಭ್ಯರ್ಥಿಗಳ ಆಯ್ಕೆ ಕುರಿತು ಕೇಂದ್ರದ ನಾಯಕರೇ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆಂದು ಹೇಳಿದ್ದಾರೆ.
ಎರಡೂ ಕ್ಷೇತ್ರಗಳಲ್ಲಿ ಪಕ್ಷ ಈಗಾಗಲೇ ಚುನಾವಣಾ ಕಾರ್ಯಗಳನ್ನು ಆರಂಭಿಸಿದೆ. ಪಕ್ಷದ ಹಿರಿಯ ನಾಯಕರು ಸಿಂದಗಿಯಲ್ಲಿ ಅಕ್ಟೋಬರ್ 4 ರಂದು ಸಭೆಗಳನ್ನು ನಡೆಸಲಿದ್ದಾರೆ. ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಇತರೆ ನಾಯಕರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುವ ವೇಳೆ ಎರಡು ಕ್ಷೇತ್ರಗಳಿಗೆ ಅಕ್ಟೋಬರ್ 8 ರಂದು ಭೇಟಿ ನೀಡಲಿದ್ದಾರೆ. ಹಾನಗಲ್ ನಲ್ಲೂ ಅಕ್ಟೋಬರ್ 7 ರಂದು ಸಭೆ ನಡೆಯಲಿದೆ ಎಂದು ಮಾಹಿತಿ ನೀಡಿದ್ದಾರೆ.