ಬೆಂಗಳೂರು: ಇಂದು ಸಂಜೆ 4ಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಂದ ವಿಶ್ವಾಸಮತ ಯಾಚನೆ ಹಿನ್ನೆಲೆ ವಿಧಾನಸಭಾ ಕಲಾಪ ಆರಂಭಗೊಂಡಿದೆ. ಸದನದಲ್ಲಿ ಕಾಂಗ್ರೆಸ್, ಜೆಡಿಎಸ್ ಮತ್ತು ಬಿಜೆಪಿ ಮುಖಂಡರು ಭಾಗಿಯಾಗಿದ್ದಾರೆ.
ಇನ್ನೂ ಬೋಪಯ್ಯ ವಿರುದ್ಧದ ಕಾಂಗ್ರೆಸ್ ಸಲ್ಲಿಸಿದ ಅರ್ಜಿಯನ್ನು ವಜಾ ಮಾಡಲಾಗಿದೆ. ಮುಂದೆ ಸ್ಪೀಕರ್ ಆಗಿ ಬೋಪಯ್ಯ ಮುಂದುವರೆಯಲಿದ್ದಾರೆ.
ವಿರೋಧ ಪಕ್ಷದ ನಾಯಕನ ಸ್ಥಾನದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕುಳಿತು ಕೊಂಡಿದ್ದಾರೆ. ಇನ್ನೂ ಸದನಕ್ಕೆ ಆಗಮಿಸುವಾಗ ಡಿ.ಕೆ. ಶಿವಕುಮಾರ್, ಆರ್.ವಿ. ದೇಶಪಾಂಡೆ ಹಾಗೂ ಇತರ ಕಾಂಗ್ರೆಸ್ ನಾಯಕರು ಸದನ ಮೆಟ್ಟಿಲಿಗೆ ನಮಸ್ಕಾರಿಸಿ ಒಳಪ್ರವೇಶಿಸಿದರು.