News Karnataka Kannada
Thursday, May 02 2024
ಬೆಂಗಳೂರು ನಗರ

ವಿಧಾನಸಭೆಯಲ್ಲಿ ಕಾಂಗ್ರೆಸ್ ಸದಸ್ಯರ ಗದ್ದಲ: ಕಲಾಪ ಫೆ. 21ಕ್ಕೆ ಮುಂದೂಡಿ ಆದೇಶ ಹೊರಡಿಸಿದ ಸ್ಪೀಕರ್

Mangaluru: ‘Government schools develop creativity of children’
Photo Credit :

ಬೆಂಗಳೂರು, ಫೆ. 18 : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ. ಎಸ್. ಈಶ್ವರಪ್ಪ ವಿರುದ್ಧ ಕಾಂಗ್ರೆಸ್ ಸದಸ್ಯರ ಧರಣಿ ಮುಂದುವರೆದಿದೆ. ವಿಧಾನಸಭೆಯ ಇಡೀ ದಿನದ ಕಲಾಪ ಇದಕ್ಕೆ ಬಲಿಯಾಗಿದೆ. ಶುಕ್ರವಾರ ವಿಧಾನಸಭೆಯಲ್ಲಿ ಕಾಂಗ್ರೆಸ್ ಸದಸ್ಯರ ಗದ್ದಲ ಮುಂದುವರೆದ ಕಾರಣ ಕಲಾಪವನ್ನು ಫೆಬ್ರವರಿ 21ಕ್ಕೆ ಮುಂದೂಡಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಆದೇಶ ಹೊರಡಿಸಿದರು.

“ಕೆಂಪು ಕೋಟೆ ಮೇಲೆ ಕೇಸರಿ ಧ್ವಜ ಹಾರಿಸುತ್ತೇವೆ” ಎಂಬ ಸಚಿವ ಕೆ. ಎಸ್. ಈಶ್ವರಪ್ಪ ಹೇಳಿಕೆ ಭಾರೀ ವಿವಾದಕ್ಕೆ ಕಾರಣವಾಗಿದೆ. ಕಾಂಗ್ರೆಸ್‌ ಸದಸ್ಯರು ವಿಧಾನಸಭೆ, ವಿಧಾನ ಪರಿಷತ್‌ನಲ್ಲಿ ಸಚಿವರ ವಿರುದ್ಧ ಅಹೋರಾತ್ರಿ ಧರಣಿ ನಡೆಸಿದರು.

ಗುರುವಾರವೂ ಕಾಂಗ್ರೆಸ್ ಸದಸ್ಯರು ಈಶ್ವರಪ್ಪ ವಿರುದ್ಧ ಪ್ರತಿಭಟನೆ ನಡೆಸಿದ್ದರು. ಭೋಜನ ವಿರಾಮದ ಬಳಿಕ ಗದ್ದಲ ಹೆಚ್ಚಾದ ಕಾರಣ ವಿಧಾನಸಭೆ ಕಲಾಪವನ್ನು ಶುಕ್ರವಾರಕ್ಕೆ ಮುಂದೂಡಲಾಗಿತ್ತು. ಕಲಾಪ ಮುಂದೂಡಿದರು. ಕಾಂಗ್ರೆಸ್ ಸದ್ಯಸ್ಯರು ಸಭಾಂಗಣದಲ್ಲಿಯೇ ಧರಣಿ ನಡೆಸುತ್ತಿದ್ದರು.

ಬಳಿಕ ಅಹೋರಾತ್ರಿ ಧರಣಿ ನಡೆಸುವುದಾಗಿ ಘೋಷಣೆ ಮಾಡಿದರು. ಧರಣಿ ಕೈ ಬಿಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ. ಎಸ್‌. ಯಡಿಯೂರಪ್ಪ ಮಾಡಿದ ಮನವಿಗೆ ಕಾಂಗ್ರೆಸ್ ನಾಯಕರು ಒಪ್ಪಿಗೆ ಕೊಡಲಿಲ್ಲ.

ಬಳಿಕ ರಾತ್ರಿ 8.30ರ ಸುಮಾರಿಗೆ ಸರ್ಕಾರದ ವತಿಯಿಂದಲೇ ಧರಣಿ ನಡೆಸುತ್ತಿರುವ ಸದಸ್ಯರಿಗೆ ಊಟದ ವ್ಯವಸ್ಥೆ ಮಾಡಲಾಗಿತ್ತು. ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ವಿಧಾನಸಭೆಯಲ್ಲಿ ಧರಣಿ ನಡೆಸಿದರು. ವಿಧಾನ ಪರಿಷತ್‌ನಲ್ಲಿಯೂ ಧರಣಿ ಮುಂದುವರೆಯಿತು.

ಶುಕ್ರವಾರದ ಕಲಾಪ ಆರಂಭವಾಗುತ್ತಿದ್ದಂತೆ ಕಾಂಗ್ರೆಸ್‌ ಸದಸ್ಯರು ಕೆ. ಎಸ್. ಈಶ್ವರಪ್ಪ ವಿರುದ್ಧ ಘೋಷಣೆಗಳನ್ನು ಕೂಗಲು ಆರಂಭಿಸಿದರು. ವಿಧಾನ ಪರಿಷತ್ತಿನಲ್ಲಿಯೂ ಗದ್ದಲ ನಡೆಯಿತು. ಸಭಾಪತಿ ಬಸವರಾಜ ಹೊರಟ್ಟಿ ಕಲಾಪವನ್ನು ಕೆಲ ಸಮಯ ಮುಂದೂಡಿದರು. ಬಳಿಕ ಕಲಾಪ ಆರಂಭವಾದರೂ ಗದ್ದಲ ಮುಂದುವರೆಯಿತು. ಇದರಿಂದಾಗಿ ವಿಧಾನ ಪರಿಷತ್ ಕಲಾಪವನ್ನು ಸೋಮವಾರಕ್ಕೆ ಮುಂದೂಡಲಾಯಿತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು