ಬೆಂಗಳೂರು: ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಅಧ್ಯಕ್ಷತೆಯಲ್ಲಿ ನಡೆದ ವಿಧಾನಸಭೆ ಅಧಿವೇಶನದಲ್ಲಿ ಸೋಮವಾರ ಎರಡು ತಿದ್ದುಪಡಿ ಸಹಿತ ಮೂರು ವಿಧೇಯಕಗಳು ಅಂಗೀಕಾರಗೊಂಡಿವೆ.
ಅಂಗೀಕಾರಗೊಂಡಿರುವ ಮಸೂದೆಗಳು:
* 2011ರ ಕೆಎಎಸ್ ಅಧಿಕಾರಿಗಳ ಹುದ್ದೆಗೆ ಮಾನ್ಯತೆ, ಕರ್ನಾಟಕ ಸಿವಿಲ್ ಸೇವೆಗಳು (ನಿಯಂತ್ರಣ) ವಿಧೇಯಕ.
* ಕರ್ನಾಟಕ ಸ್ಟ್ಯಾಂಪ್ (ತಿದ್ದುಪಡಿ) ವಿಧೇಯಕ.
* ಕರ್ನಾಟಕ ಕ್ರಿಮಿನಲ್ ಕಾನೂನು ಅಧ್ಯಾದೇಶ (ತಿದ್ದುಪಡಿ) ವಿಧೇಯಕ.
ಕಾನೂನು ಮತ್ತು ಸಂಸದೀಯ ಸಚಿವ ಜೆ.ಸಿ. ಮಾಧುಸ್ವಾಮಿ ಅವರು 2011ರ ಕೆಎಎಸ್ ಅಧಿಕಾರಿಗಳ ಹುದ್ದೆಗೆ ಮಾನ್ಯತೆ, ಕರ್ನಾಟಕ ಸಿವಿಲ್ ಸೇವೆಗಳು (ನಿಯಂತ್ರಣ) ವಿಧೇಯಕವನ್ನು ಸಭೆಯ ಮುಂದೆ ಮಂಡಿಸಿದರು. ಸಭಾಧ್ಯಕ್ಷರು ಮಸೂದೆಯನ್ನು ಧ್ವನಿ ಮತಕ್ಕೆ ಹಾಕಿ, ಅನುಮೋದನೆ ಸಿಕ್ಕಿರುವುದನ್ನು ಘೋಷಿಸಿದರು.
ಕಂದಾಯ ಸಚಿವ ಆರ್. ಅಶೋಕ್ ಅವರು ಕರ್ನಾಟಕ ಸ್ಟ್ಯಾಂಪ್ ತಿದ್ದುಪಡಿ ವಿಧೇಯಕ 2022ನ್ನು ಸಭೆಗೆ ಮಂಡಿಸಿದರು. ಇನ್ನೊಂದು ವಿಧೇಯಕ ಕರ್ನಾಟಕ ಕ್ರಿಮಿನಲ್ ಕಾನೂನು ಅಧ್ಯಾದೇಶ (ತಿದ್ದುಪಡಿ)ವನ್ನು ಕಾನೂನು ಸಚಿವ ಮಾಧುಸ್ವಾಮಿ ಅವರು ಮಂಡನೆ ಮಾಡಿದರು. ಎರಡೂ ಮಸೂದೆಗಳನ್ನು ಧ್ವನಿ ಮತಕ್ಕೆ ಹಾಕಿದ ಸಭಾಧ್ಯಕ್ಷರು, ವಿಧೇಯಕಗಳಿಗೆ ಅನುಮೋದನೆ ಲಭಿಸಿದೆ ಎಂದು ಪ್ರಕಟಿಸಿದರು.
ಮೇ 18 ರಿಂದ ಮೇ 22 ರ ವರೆಗೆ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಉತ್ತರ ಕನ್ನಡ ಜಿಲ್ಲೆಯ ಕರಾವಳಿಯಲ್ಲಿ…
ಪಕ್ಷದ ಕಾರ್ಯಕರ್ತರ ಗದ್ದಲ, ಕಾಲ್ತುಳಿತದಂತಹ ಪರಿಸ್ಥಿತಿಯಿಂದಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್…
ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಉತ್ತರ ಕರ್ನಾಟಕ ಭಾಗದಲ್ಲಿ ಸಾಮೂಹಿಕ ನಕಲು ಆಗುತ್ತಿರುವುದನ್ನು ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಭೋಜೇಗೌಡ ಒಪ್ಪಿಕೊಂಡಿದ್ದಾರೆ. ಈ ಬಾರಿ…
ನಗರದಲ್ಲಿ ಸಂಚರಿಸುವ ನಗರ ಸಾರಿಗೆಯ ಎಲ್ಲ ಬಸ್ಗಳು ಡಾ.ಬಿ.ಆರ್.ಅಂಬೇಡ್ಕರ್ ಮುಖ್ಯ ವೃತ್ತದ ಮೂಲಕ ಹಾದು ಹೋಗುವಂತೆ ಕ್ರಮ ಕೈಗೊಳ್ಳಬೇಕೆಂದು ಎಂದು…
ರಾಜ್ಯ ಬಿಜೆಪಿ ಉಪಾಧ್ಯಕ್ಷ, ನಟಿ, ಮಾಳವಿಕಾ ಅವಿನಾಶ್ ಅವರ ತಂದೆ ನಟೇಶನ್ ಗಣೇಶನ್ ಅವರು ನಿಧನರಾಗಿದ್ದಾರೆ.
ಪುಣೆಯಲ್ಲಿ ಭೀಕರ ಘಟನೆಯೊಂದರಲ್ಲಿ, ವ್ಯಕ್ತಿಯೊಬ್ಬ ತನ್ನ ಪತ್ನಿಯ ಜನನಾಂಗವನ್ನು ಕಬ್ಬಿಣದ ಮೊಳೆಗಳಿಂದ ವಿರೂಪಗೊಳಿಸಿದ್ದಾನೆ ಮತ್ತು ಆಕೆಯ ಮೇಲೆ ಸಂದೇಹ ವ್ಯಕ್ತಪಡಿಸಿದ…