ಬೆಂಗಳೂರು: ವಿಧಾನಸೌಧ ಎದುರಿನ ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದ್ದು, ಏರ್ಬ್ಯಾಗ್ ತೆರೆದುಕೊಂಡಿದ್ದರಿಂದ ಚಾಲಕ ಅಪಾಯದಿಂದ ಪಾರಾಗಿದ್ದಾರೆ. ‘ಸೋಮವಾರ ಅಪಘಾತ ಸಂಭವಿಸಿದ್ದು, ಕಾರಿನ ಮುಂಭಾಗ ಜಖಂಗೊಂಡಿದೆ. ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ಕಬ್ಬನ್ ಪಾರ್ಕ್ ಸಂಚಾರ ಪೊಲೀಸರು ಹೇಳಿದರು.
‘ಹುಂಡೈ ಐ- 10 ಕಾರು ಚಲಾಯಿಸಿಕೊಂಡು ಚಾಲಕ ಹೊರಟಿದ್ದ. ವಿಧಾನಸೌಧ ಎದುರಿನ ರಸ್ತೆಯಲ್ಲಿ ಚಾಲಕನಿಗೆ ತಲೆ ಸುತ್ತು ಬಂದಿತ್ತು. ಚಾಲನೆ ಮೇಲೆ ನಿಯಂತ್ರಣ ತಪ್ಪಿದ್ದರಿಂದ ಕಾರು, ರಸ್ತೆ ವಿಭಜಕಕ್ಕೆ ಗುದ್ದಿತ್ತು. ಅದರ ರಭಸಕ್ಕೆ ಚಾಲಕನಿಗೆ ಗಂಭೀರ ಪೆಟ್ಟು ಬೀಳಬೇಕಿತ್ತು. ಆದರೆ, ಏರ್ಬ್ಯಾಗ್ನಿಂದ ಯಾವುದೇ ತೊಂದರೆ ಆಗಿಲ್ಲ’ ಎಂದೂ ತಿಳಿಸಿದರು.