ಬೆಂಗಳೂರು : ಕಾಂಗ್ರೆಸ್ ವಿರುದ್ಧ ಸಿಡಿದೆದ್ದಿರುವ ಸಿ.ಎಂ ಇಬ್ರಾಹಿಂ ಅವರು ಗುರುವಾರ ವಿಧಾನ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ರಾಜೀನಾಮೆಯನ್ನು ಸಭಾಪತಿ ಬಸವರಾಜ ಹೊರಟ್ಟಿ ಅವರು ಅಂಗೀಕರಿಸಿದ್ದಾರೆ.
ಕಾಂಗ್ರೆಸ್ ಪಕ್ಷಕ್ಕೆ ಹಾಗೂ ಎಂಎಲ್ ಸಿ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ಸಿ.ಎಂ ಇಬ್ರಾಹಿಂ ಹೇಳಿದ್ದರು.ಸಿದ್ದರಾಮಯ್ಯನವರಿಗೂ ರಾಜೀನಾಮೆ ಪತ್ರ ಕಳುಹಿಸಿದ್ದೇನೆ ಎಂದಿದ್ದರು.
ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡುವುದಾಗಿ ಹಲವು ದಿನಗಳ ಹಿಂದೆಯೇ ಹೇಳಿದ್ದ ಸಿ.ಎಂ. ಇಬ್ರಾಹಿಂ ಬಹಿರಂಗ ವಾಗ್ದಾಳಿ ನಡೆಸುತ್ತಿದ್ದರು. ಆದರೂ ಅವರನ್ನು ಪಕ್ಷದಲ್ಲಿ ಉಳಿಸಿಕೊಳ್ಳಲು ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಅಲ್ಪಸಂಖ್ಯಾತ ನಾಯಕರು ಹಲವು ಪ್ರಯತ್ನ ನಡೆಸಿದ್ದರು. ಸಿ.ಎಂ ಇಬ್ರಾಹಿಂ ಅವರು ಈಗಾಗಲೇ ಜೆಡಿಎಸ್ ಸೇರುವ ಸಿದ್ಧತೆ ನಡೆಸಿದ್ದಾರೆ.
ಪೇಟಿಎಂನ ಮಾತೃ ಸಂಸ್ಥೆಯಾಗಿರುವ ಒನ್ 97 ಕಮ್ಯುನಿಕೇಷನ್ಸ್ ಅಧ್ಯಕ್ಷ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭವೇಶ್ ಗುಪ್ತಾ ಅವರು ತಮ್ಮ ಹುದ್ದೆಗೆ…
ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸತ್ತೇಗಾಲ ವಿವಿಧಡೆ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಶಾಸಕ ಎಂ.ಆರ್ ಮಂಜುನಾಥ್ ಭೇಟಿ ನೀಡಿ ಪರಿಶೀಲನೆ…
ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಇಂದು (ಶನಿವಾರ) ಭಾರತೀಯ ವಾಯುಪಡೆ ಬೆಂಗಾವಲು ಪಡೆ ವಾಹನದ ಮೇಲೆ ಭಯೋತ್ಪಾದಕರು ದಾಳಿ…
ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಿದ್ದಾಪುರದಲ್ಲಿ ನಡೆದ ಬಿಜೆಪಿಯ ಬೃಹತ್ ರೋಡ್ ಶೋ ನಲ್ಲಿ ಮಂಗಳೂರು ನಗರ ದಕ್ಷಿಣದ ಶಾಸಕರಾದ ವೇದವ್ಯಾಸ್…
ಕಳೆದ 25 ವರ್ಷಗಳಿಂದ ವಿಜಯಪುರ ಜಿಲ್ಲೆಯ ಪ್ರಬುದ್ಧ ಮತದಾರರು ಯಾವುದೇ ಜಾತಿ, ಮತ, ಪಂಥ ನೋಡದೇ ಜಾತಿಗಿಂತ ದೇಶದ ಹಿತವೇ…
ವಿಜಯಪುರ ಲೋಕಸಭಾ ಕ್ಷೇತ್ರದ ಪ್ರತಿಯೊಂದು ಬೂತ್ ಗಳಲ್ಲಿ ಬಿಜೆಪಿ ಪರ ಉತ್ತಮ ವಾತಾವರಣ ಸೃಷ್ಟಿಯಾಗಿದ್ದು, ಬಿಜೆಪಿ ಪರ ಅಲೆ ಇದೆ…