News Karnataka Kannada
Sunday, April 28 2024
ಬೆಂಗಳೂರು ನಗರ

ವಿನಾಕಾರಣ ನನ್ನ ಮಗಳ ಮೇಲೆ ಆರೋಪ ಮಾಡಿದ್ರೆ ಸುಮ್ಮನಿರಲ್ಲ; ಶಾಸಕ ಎಂ.ಪಿ ರೇಣುಕಾಚಾರ್ಯ

Photo Credit :

ಬೆಂಗಳೂರು : ನಾನು ಯಾವುದೇ ಜಾತಿ ಪ್ರಮಾಣ ಪತ್ರವನ್ನು ಪಡೆದಿಲ್ಲ. ನನ್ನ ಮಗಳು ಕೂಡ ಪಡೆದಿಲ್ಲ. ವಿನಾಕಾರಣ ನನ್ನ ಮಗಳ ಮೇಲೆ ಆರೋಪ ಮಾಡಿದ್ರೇ, ತಾನು ಸುಮ್ಮನೆ ಇರೋದಿಲ್ಲ ಎಂಬುದಾಗಿ ಸಿಎಂ ರಾಜಕೀಯ ಕಾರ್ಯದರ್ಶಿ, ಶಾಸಕ ಎಂ.ಪಿ ರೇಣುಕಾಚಾರ್ಯ ಗುಡುಗಿದ್ದಾರೆ.

ಇಂದು ವಿಧಾನಸೌಧದ ಕೆಂಗಲ್ ಹನುಮಂತಯ್ಯ ದ್ವಾರದ ಬಳಿಯ್ಲಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ನಾನು ಯಾವುದೇ ಜಾತಿ ಪ್ರಮಾಣ ಪತ್ರ ಪಡೆದಿಲ್ಲ.

ನನ್ನ ಮಗಳು ಹೈಸ್ಕೂಲ್ ಗೆ ಹೋಗುವಾಗ ಜಾತಿ ಪ್ರಮಾಣ ಪತ್ರ ಪಡೆದಿದ್ದಳು. 40 ಲಕ್ಷ ಹಣ ಪಡೆದಿದ್ದ ಎಂದು ನನ್ನ ಆರೋಪ ಮಾಡಿದ್ರು. ನನ್ನ ಬಗ್ಗೆ ಏನಾದರೂ ರಾಜಕಾರಣ ಮಾಡಲಿ, ಆದ್ರೇ ವಿನಾಕಾರಣ ನನ್ನ ಮಗಳ ಮೇಲೆ ಆರೋಪ ಮಾಡಿದ್ರೆ ಸುಮ್ಮನಿರಲ್ಲ. ಅದಕ್ಕೆ ಸರಿಯಾದ ಉತ್ತರ ನೀಡುತ್ತೇನೆ. ಕೋರ್ಟ್ ನಲ್ಲಿ ಮಾನನಷ್ಟ ಮೊಕದ್ದಮೆ ಧಾವೆ ಹೂಡುವುದಾಗಿ ಖಡಕ್ ಎಚ್ಚರಿಕೆ ನೀಡಿದರು.

ನನ್ನ ಮಗಳ ಬಗ್ಗೆ ಅರೋಪ ಮಾಡುವವರು, ಸೂಕ್ತ ದಾಖಲೆ ಇದ್ದರೆ ಬಿಡುಗಡೆ ಮಾಡಲಿ. ಬುಟ್ಟಿಯಲ್ಲಿ ಹಾವು ಇದೆ ಅಂತ ಬುರುಡೆ ಬಿಡಬೇಡಿ. ಸರ್ಟಿಫಿಕೇಟ್ ಪಡೆದಿದ್ರೆ ದಾಖಲೆ ಬಿಡುಗಡೆ ಮಾಡಿ. ಈ ರೀತಿಯ ಸುಳ್ಳು ಆರೋಪ ಮಾಡುವುದು ಸರಿಯಲ್ಲ. ಸಿಎಂ , ಕಾನೂನು ಹಾಗೂ ಗೃಹ ಸಚಿವರು ಪರಿಶೀಲನೆ ಮಾಡಲಿ. ನಾನು ಯಾವುದೇ ಸರ್ಕಾರದ ಸೌಲಭ್ಯ ಪಡೆದಿಲ್ಲ. ಪಡೆದಿದ್ದರೆ ದಾಖಲೆ ಬಿಡುಗಡೆ ಮಾಡಿ ಎಂಬುದಾಗಿ ಸವಾಲ್ ಹಾಕಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು