News Karnataka Kannada
Sunday, April 28 2024
ಬೆಂಗಳೂರು ನಗರ

ವಿವಾದಾತ್ಮಕ ಹೇಳಿಕೆ: ಜಮೀರ್ ಅಹ್ಮದ್ ಖಾನ್ ಕ್ಷಮೆ ಕೇಳಬೇಕು – ಡಿ ಕೆ ಶಿವಕುಮಾರ್

5 ವರ್ಷಗಳ ಕಾಲ ಗ್ಯಾರಂಟಿ ಯೋಜನೆಗಳನ್ನು ಜನರಿಗೆ ಕೊಡುತ್ತೇವೆ, ರದ್ದು ಮಾಡುವುದಿಲ್ಲ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದರು.
Photo Credit :

ಬೆಂಗಳೂರು : ಹಿಜಾಬ್ ಧರಿಸದಿದ್ದರೆ ಅತ್ಯಾಚಾರಗಳು ಹೆಚ್ಚಾಗುತ್ತವೆ ಎಂಬ ಜಮೀರ್ ಅಹ್ಮದ್ ಖಾನ್ ಹೇಳಿಕೆಯನ್ನು ನಾನು ಒಪ್ಪುವುದಿಲ್ಲ. ಅವರು ಆ ಮಾತನ್ನು ಹಿಂಪಡೆಯಲು ಹೇಳುತ್ತೇನೆ. ಅವರು ಕ್ಷಮೆ ಕೇಳಬೇಕು. ಈ ವಿಚಾರದ ಬಗ್ಗೆ ಮಾತನಾಡಬಾರದು ಎಂದು ಹೇಳಿದ್ದೆ. ಆದರೂ ಕೆಲವರು ಮಾತನಾಡುತ್ತಿದ್ದಾರೆ‌. ಹಾಗಾಗಿ ವಿವರಣೆ ಕೇಳುತ್ತೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಈಶ್ವರಪ್ಪ ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ್ದಾರೆ. ಅವರ ಮೇಲೆ ಪ್ರಕರಣದ ದಾಖಲಿಸಬೇಕು. ಮಂತ್ರಿಯಾದರೇನು, ಶಾಸಕರಾದರೇನು? ಅವರ ಮೇಲೆ ಮೊದಲು ಪ್ರಕರಣ ದಾಖಲಿಸಿ. ಅವರನ್ನ ಸಚಿವ ಸ್ಥಾನದಿಂದ ಕೈಬಿಡಬೇಕು ಎಂದು ಒತ್ತಾಯಿಸಿದರು.

ರಾಷ್ಟ್ರಧ್ವಜದ ವಿಚಾರ ಸದನದಲ್ಲಿ ಪ್ರಸ್ತಾಪ ಮಾಡುತ್ತೇವೆ. ನಾವು ಸುಮ್ಮನೆ ಕೂರಲು‌ ಸಾಧ್ಯವೇ. ನಾವು ಇದರ ವಿರುದ್ಧ ಹೋರಾಟ ಮಾಡುತ್ತೇವೆ. ಖಂಡಿತ ಇದರ ಬಗ್ಗೆ ಪ್ರಸ್ತಾಪ ಮಾಡುತ್ತೇವೆ. ರಾಷ್ಟ್ರ ಧ್ವಜದ ಬಗ್ಗೆ ಅವಹೇಳನ ಮಾಡುತ್ತಾರೆ. ಅವರು ದೇಶದ್ರೋಹಿಗಳು. ರೈತರ ಮೇಲೆ ಕೇಸ್ ಹಾಕುತ್ತಾರೆ, ಸಣ್ಣ ಪುಟ್ಟವರ ಮೇಲೆ ಕೇಸ್ ಹಾಕುತ್ತಾರೆ, ದೇಶದ್ರೋಹಿಗಳ ಮೇಲೆ ಯಾಕೆ ಕೇಸ್ ಹಾಕುವುದಿಲ್ಲ ಎಂದು ಡಿಕೆಶಿ ಆಗ್ರಹಿಸಿದ್ದಾರೆ.

ರಾಜ್ಯದಲ್ಲಿ ಮಕ್ಕಳಿಗೆ ಅನ್ಯಾಯವಾಗುತ್ತಿದೆ. ಶಾಲಾ ಕಾಲೇಜುಗಳಲ್ಲಿ ಅನ್ಯಾಯವಾಗುತ್ತಿದೆ. ನಾರಾಯಣಗುರು ವಿಚಾರದಲ್ಲಿ ಅನ್ಯಾಯವಾಗಿದೆ. ಬಿಟ್ ಕಾಯಿನ್, 40% ಕಮೀಷನ್ ಆರೋಪವಿದೆ. ಅದಕ್ಕೆ ಮಕ್ಕಳನ್ನು ಎತ್ತಿ ಕಟ್ಟುತ್ತಿದ್ದಾರೆ. ಹೀಗಾಗಿ ನಾವು ಸದನದಲ್ಲಿ ಕಪ್ಪು ಬಟ್ಟೆ ಧರಿಸಿ ಪ್ರತಿಭಟನೆ ಮಾಡಿದ್ದೇವೆ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು