ಬೆಂಗಳೂರು : ರಾಜ್ಯ ಸರ್ಕಾರದಿಂದ ಕೊರೋನಾ ನಿಯಂತ್ರಣಕ್ಕಾಗಿ ಬೆಂಗಳೂರಿನಲ್ಲಿ ಶಾಲೆಗಳನ್ನು ಬಂದ್ ಮಾಡಲಾಗಿದೆ. ರಾಜ್ಯಾಧ್ಯಂತ ನೈಟ್ ಕರ್ಪ್ಯೂ , ವೀಕೆಂಡ್ ಕರ್ಪ್ಯೂ ಜಾರಿಗೊಳಿಸಲಾಗಿದೆ. ಈ ಸರ್ಕಾರದ ನಿಯಮಕ್ಕೆ ಸ್ವಪಕ್ಷೀಯ ಬಿಜೆಪಿ ಸಚಿವರೇ ಅಸಮಾಧಾನ ಹೊರಹಾಕಿದ್ದಾರೆ.
ಈ ಬಗ್ಗೆ ಇಂದು ವಿಧಾನಸೌಧದದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ, ರಾಜ್ಯದಲ್ಲಿ ಒಂದೇ ರೂಲಿದೆ ಎಂದು ಯಾರು ಹೇಳಿದ್ದು. ಯಾವ ಕರ್ಪ್ಯೂ ಇಲ್ಲ ಏನೂ ಇಲ್ಲ. ನಮ್ಮ ಶಿವಮೊಗ್ಗದಲ್ಲಿ ಯಾವ ಸುಡುಗಾಡು ಇಲ್ಲ. ಜಿಲ್ಲೆಗಳಿಗೆ ಇನ್ನೂಆದೇಶ ಬಂದಿಲ್ಲ. ನಾನು ಬೇಜಾರು ಮಾಡಿಕೊಂಡಿಲ್ಲ. ಜನರ ಭಾವನೆಗಳನ್ನ ನಿನ್ನೆ ವ್ಯಕ್ತಪಡಿಸಿದ್ದೇನಷ್ಟೇ ಎಂದರು.
ಬೆಂಗಳೂರಿನಲ್ಲಿ ಬಿಗಿಮಾಡೋದು ಮಾಡಿ, ಬೇರೆ ಜಿಲ್ಲೆಗಳಲ್ಲಿ ಮಾಡುವುದು ಬೇಡವಾ.? ಇದನ್ನೇ ಸಿಎಂ ಜೊತೆ ನಾನುಮಾತನಾಡ್ತೇನೆ. ಕ್ಯಾಬಿನೆಟ್ ನಲ್ಲಿ ನಾನು ಮಾತನಾಡ್ತೇನೆ ಎಂದು ಹೇಳಿದರು. ಈ ಮೂಲಕ ರಾಜ್ಯ ಸರ್ಕಾರ ಜಾರಿಗೆ ತಂದಿರುವಂತ ಕೊರೋನಾ ಕಂಟ್ರೋಲ್ ನಿಯಮದ ವಿರುದ್ಧ ಅಸಮಾಧಾನ ಹೊರ ಹಾಕಿದರು.