News Karnataka Kannada
Monday, May 06 2024
ಬೆಂಗಳೂರು ನಗರ

ವೀಕೆಂಡ್ ಕರ್ಫ್ಯೂ ಒಂದು ಹೊಣೆಗಾರಿಕೆಯನ್ನಾಗಿ ಸ್ವೀಕರಿಸಿ, ಮಾರ್ಗಸೂಚಿ ಪಾಲನೆ ಮಾಡಿ: ಸಚಿವ ಆರಗ ಜ್ಞಾನೇಂದ್ರ

Aaraga Jnanendra
Photo Credit :

ಜನರ ಅನುಕೂಲಕ್ಕಾಗಿ ವೀಕೆಂಡ್ ಕರ್ಫ್ಯೂ ವಾಪಸ್ ಪಡೆಯಲಾಗಿದ್ದು, ಈ ವೇಳೆ ಮಾರ್ಗಸೂಚಿ ಪಾಲಿಸದೆ ಮೈಮರೆತು ಪರಿಸ್ಥಿತಿ ಹೆಚ್ಚು ಕಡಿಮೆ ಆದರೆ ಲಾಕ್​​​​ಡೌನ್ ಕೂಡ ಜಾರಿ ಮಾಡುವ ನಿರ್ಧಾರಕ್ಕೆ ಸರ್ಕಾರ ಮುಂದಾಗಲಿದೆ ಎಂದುಗೃಹ ಸಚಿವ ಆರಗ ಜ್ಞಾನೇಂದ್ರ ಎಚ್ಚರಿಕೆ ನೀಡಿದ್ದಾರೆ.

ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ವೀಕೆಂಡ್ ಕರ್ಫ್ಯೂ ರದ್ದುಗೊಳಿಸಿ ಸರ್ಕಾರ ತೆಗೆದುಕೊಂಡಿರುವ ನಿರ್ಧಾರದಿಂದ ಜನರ ಹೊಣೆಗಾರಿಕೆ ಹೆಚ್ಚಾಗಿದೆ.

ಜನರು ಕೋವಿಡ್​ ಮಾರ್ಗಸೂಚಿ ಪಾಲಿಸಿ ಸಹಕಾರ ನೀಡಬೇಕು. ನಮ್ಮ ಪ್ರಾಣ, ನಮ್ಮ ಆರೋಗ್ಯ, ನಮ್ಮ ಕೈಯಲ್ಲಿದೆ ಎನ್ನುವ ಜವಾಬ್ದಾರಿಯಿಂದ ಸಹಕರಿಸಬೇಕು. ಹೇಗೆ ಬೇಕೋ ಹಾಗೆ ಜನತೆ ವರ್ತಿಸದರೆ, ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಹೆಚ್ಚಾದರೆ ಲಾಕ್​ಡೌನ್​​ ಮಾಡುವ ಸಾಧ್ಯತೆ ಕೂಡ ಇದೆ ಎಂದು ಎಚ್ಚರಿಕೆ ನೀಡಿದರು.

ವೀಕೆಂಡ್ ಕರ್ಫ್ಯೂನಿಂದ ಬೀದಿ ಬದಿ ವ್ಯಾಪಾರಿಗಳು, ಆಟೋ, ಹೂವಿನ ವ್ಯಾಪಾರಿಗಳು, ಸಾಮಾನ್ಯ ಬಡವರಿಗೆ ತೊಂದರೆ ಉಂಟಾಗಿತ್ತು. ಇದನ್ನು ಗಮನದಲ್ಲಿಟ್ಟುಕೊಂಡು ತೆಗೆದು ಹಾಕಲಾಗಿದೆ.

ಹಾಗಾಗಿ ವೀಕೆಂಡ್ ಕರ್ಫ್ಯೂ ಒಂದು ಹೊಣೆಗಾರಿಕೆಯನ್ನಾಗಿ, ಮಾನಸಿಕವಾಗಿ ಜನರು ಸ್ವೀಕಾರ ಮಾಡಿದ್ದಾರೆ. ಆ ಮಾರ್ಗಸೂಚಿ ಪಾಲನೆ ಮಾಡುತ್ತಾರೆ ಎನ್ನುವ ಮನಸ್ಥಿತಿಯಲ್ಲಿಯೇ ನಾವು ಈ ನಿರ್ಧಾರ ಕೈಗೊಂಡಿದ್ದು, ಜನರು ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು