ಬೆಂಗಳೂರು : ವರಮಹಾಲಕ್ಷ್ಮಿ ಹಬ್ಬದ ದಿನ ಇಡೀ ಬೆಂಗಳೂರನ್ನೇ ಬೆಚ್ಚಿ ಬೀಳಿಸಿದ್ದ ವೃದ್ಧ ದಂಪತಿ ಕೊಲೆ ಪ್ರಕರಣ ಸಂಬಂಧ ಕುಮಾರಸ್ವಾಮಿ ಲೇಔಟ್ ಪೊಲೀಸರು ಇಂದು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಪ್ರಮುಖ ಆರೋಪಿ ನಾರಾಯಣಪ್ಪ ಸೇರಿ ನಾಲ್ವರನ್ನು ಬಂಧಿಸಲಾಗಿದೆ. ಬಂದಿತರನ್ನು ನಾರಾಯಣಪ್ಪ ಅಲಿಯಾಸ್ ನಾರಾಯಣಸ್ವಾಮಿ, ತಿರುಮಲ, ರಾಮು ಹಾಗೂ ಶೇಕ್ ಆಸೀಫ್ ಎಂದು ಗುರುತಿಸಲಾಗಿದೆ.
ವರಮಹಾಲಕ್ಷ್ಮಿ ಹಬ್ಬದ ದಿನ ಶಾಂತರಾಜು-ಪ್ರೇಮಲತಾ ಎಂಬ ದಂಪತಿಯನ್ನು ಆರೋಪಿಗಳು ಭೀಕರವಾಗಿ ಹತ್ಯೆ ಮಾಡಿದ್ದರು. ಆರೋಪಿ ನಾರಾಯಣಪ್ಪ 7 ವರ್ಷಗಳಿಂದ ವೃದ್ಧ ದಂಪತಿ ಮನೆಯಲ್ಲಿ ಬಾಡಿಗೆಗೆ ಇದ್ದ. ಈತ ಹಿಂದೂಪುರ ಮೂಲದವನಾಗಿದ್ದು, ಇತ್ತೀಚಿಗೆ ವಿಪರೀತ ಸಾಲಕ್ಕೆ ಸಿಲುಕಿದ್ದ. ಹೀಗಾಗಿ ಹಣದ ಅವಶ್ಯಕತೆ ಹೆಚ್ಚಾಗಿತ್ತು. ಇದಕ್ಕಾಗಿ ಬಾಡಿಗೆಗೆ ಇದ್ದ ಮಾಲೀಕನ ಮನೆಯನ್ನೇ ದರೋಡೆ ಮಾಡಲು ಸ್ಕೆಚ್ ಹಾಕಿದ್ದ.
ವೃದ್ಧ ದಂಪತಿ ಚಿನ್ನಾಭರಣ ಎಲ್ಲಿಟ್ಟಿದ್ದಾರೆ ಅಂತ ಆರೋಪಿ ನಾರಾಯಣಪ್ಪ ನೋಡಿಕೊಂಡಿದ್ದ. ಅವರ ಮನೆಗೆ ಕನ್ನ ಹಾಕಲು ವೃದ್ಧ ದಂಪತಿಯನ್ನು ಕೊಲೆ ಮಾಡಲು ನಿರ್ಧರಿಸಿದ್ದ. ಹೀಗಾಗಿ ನಾರಾಯಣಪ್ಪ ತನ್ನ ಪರಿಚಯಸ್ಥರ ಮೂಲಕ ಕೊಲೆಗೆ ಸಂಚು ರೂಪಿಸಿ ಹತ್ಯೆ ಮಾಡಿದ್ದ.
ನಗರದ ನಾವದಗೇರೆ ಸಮೀಪದ ಸರ್ವೇ ನಂ. 60ರಲ್ಲಿ ಜಿಲ್ಲಾಡಳಿತದಿಂದ ಮೀಸಲಿಟ್ಟಿರುವ ಒಂದು ಎಕರೆ ಹತ್ತು ಗುಂಟೆ ಜಮೀನಿನಲ್ಲಿ ನಿರ್ಮಿಸಲು ಉದ್ದೇಶಿಸಿರುವ…
ನಗರದ ಸರಸ್ವತಿ ಶಾಲೆಯ ಹಿರಿಯ ವಿದ್ಯಾರ್ಥಿಗಳ ಸಂಘದಿಂದ ಶನಿವಾರ ಗುರುವಂದನಾ ಹಾಗೂ ಹಳೆಯ ವಿದ್ಯಾರ್ಥಿಗಳ ಸ್ನೇಹ ಮಿಲನ ಕಾರ್ಯಕ್ರಮವನ್ನು ಬಹಳ…
ತಮಿಳು ಚಿತ್ರರಂಗದ ಜನಪ್ರಿಯ ನಟ ಸಿಂಭು ಅವರ ವಿರುದ್ಧ ಇದೀಗ ನಿರ್ದೇಶಕ ದೂರು ನೀಡಿದ್ದು ತಮಿಳು ಚಿತ್ರರಂಗದಿಂದ ಹೊರಗಟ್ಟಬೇಕು ಎಂದು…
ಹಲವಾರು ಕಾರಣಗಳಿಗಾಗಿ ಕೆಲಸದ ಸ್ಥಳದಲ್ಲಿ ಅತಿಯಾದ ಒತ್ತಡವುಂಟಾಗುತ್ತದೆ. ಇದರಿಂದ ಆಯಾಸ ಹಾಗೂ ವಿಶ್ರಾಂತಿಯ ಕೊರತೆ ತಲೆದೋರುತ್ತದೆ. ಇದರಿಂದ ವ್ಯಕ್ತಿ ಸಿಕ್ಕಾಪಟ್ಟೆ…
ರಾಜ್ಯದ ಕೆಲವಡೆ ಬಾರಿ ಮಳೆಯಾಗುವ ಸಾಧ್ಯತೆ ಇರುವ ಕಾರಣ ಹವಮಾನ ಇಲಾಖೆ 8 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್, 23 ಜಿಲ್ಲೆಗಳಿಗೆ…
ತಾಯಂದಿರ ದಿನ , ತಾಯಂದಿರ ಗೌರವಾರ್ಥ ರಜಾದಿನವನ್ನು ವಿಶ್ವದಾದ್ಯಂತ ದೇಶಗಳಲ್ಲಿ ಆಚರಿಸಲಾಗುತ್ತದೆ. ಅದರ ಆಧುನಿಕ ರೂಪದಲ್ಲಿ ರಜಾದಿನವು ಹುಟ್ಟಿಕೊಂಡಿತುಯುನೈಟೆಡ್ ಸ್ಟೇಟ್ಸ್…