ಬೆಂಗಳೂರು: ವೈದ್ಯರ ಸೂಚನೆಯಂತೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಇನ್ನೂ 10ದಿನ ವಿಶ್ರಾಂತಿ ಪಡೆಯಲಿದ್ದಾರೆ.
15 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಹಿನ್ನೆಲೆ ಪ್ರಚಾರ ಕೈಗೊಂಡ ಕುಮಾರಸ್ವಾಮಿ ಅವರ ಆರೋಗ್ಯದಲ್ಲಿ ಏರುಪೇರಾಗಿದೆ.
ತಪಾಸಣೆಗೆ ಒಳಪಟ್ಟ ವೇಳೆ ರಕ್ತದಲ್ಲಿ ಸೋಂಕು ಉಂಟಾಗಿದೆ ಎಂದು ತಿಳಿಸಿದ್ದರು.
ವೈದ್ಯರ ಸೂಚನೆಯಂತೆ ಇನ್ನೂ 10ದಿನದಲ್ಲಿ ಕುಮಾರಸ್ವಾಮಿ ಯಾವುದೇ ಪ್ರವಾಸ, ರಾಜಕೀಯ ನಾಯಕರ ಹಾಗೂ ಸಾರ್ವಜನಕಿಕರ ಭೇಟಿ ಮಾಡದೇ ವಿಶ್ರಾಂತಿ ಪಡೆಯಲಿದ್ದಾರೆ.