ದಿನಾಂಕ 7 ಪೆಬ್ರುವರಿಯಂದು ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಬೆಂಗಳೂರು ಪೋಲಿಸ್ ಕಮಿಷನರ್ ಶ್ರೀ ಕಮಲ ಪಂಥ ಇವರಿಗೆ ‘ವ್ಯಾಲೆಂಟೈನ್ ಡೇ’ ಹೆಸರಿನಲ್ಲಿ ನಡೆಯುವ ಅಹಿತಕರ ಘಟನೆಯ ಮೇಲೆ ಕ್ರಮ ಜರುಗಿಸಲು ಆಗ್ರಹಿಸಿ ಮನವಿಯನ್ನು ನೀಡಲಾಯಿತು.
ಈ ಸಂದರ್ಭದಲ್ಲಿ ಹಿಂದೂ ಜನಜಾಗೃತಿ ಸಮಿತಿಯ ನಾ. ರ ಜಯಂತ, ಶ್ರೀ. ನೀಲೇಶ್ವರ, ಶ್ರೀ. ಜಯಪ್ರಕಾಶ, ಶ್ರೀ ಗುರುಪ್ರಸಾದ ಮುಂತಾದವರು ಉಪಸ್ಥಿತರಿದ್ದರು.
ಮನವಿಯಲ್ಲಿ ಕಳೆದ ಅನೇಕ ವರ್ಷಗಳಿಂದ ಭಾರತದಂತಹ ಸಾಂಸ್ಕ್ರತಿಕ ದೇಶದಲ್ಲಿ 14 ಫೆಬ್ರವರಿಯಂದು ‘ವ್ಯಾಲೆಂಟೈನ್ ಡೇ’ ಹೆಸರಿನಲ್ಲಿ ಪ್ರೇಮಿಗಳ ದಿನವನ್ನು ಆಚರಿಸುವ ಪದ್ಧತಿಯು ಹೆಚ್ಚಳವಾಗಿದೆ. ದೇಶದಲ್ಲಿ ಈ ಮೂಲಕ ವ್ಯವಹಾರಿಕ ಲಾಭಗಳಿಸುವ ಉದ್ಧೇಶದಿಂದ ಪಾಶ್ಚಾತ್ಯರ ಈ ಅಂದಾನುಕರಣೆಯು ಯುವಕ-ಯುವತಿಯರ ಅನೈತಿಕತೆ ಮತ್ತು ಸ್ವೇಚ್ಚಾಚಾರಕ್ಕೆ ಕಾರಣವಾಗುತ್ತಿದೆ.
ಪಾಶ್ಚಾತ್ಯರ ಈ ವ್ಯಾಲೆಂಟೈನ್ ದಿನ ಯುವತಿಯರನ್ನು ಪೀಡಿಸುವ ಮತ್ತು ಅವರಿಗೆ ಹಿಂಸೆ ನೀಡುವ, ಯುವತಿಯರಿಗೆ ಲೈಂಗಿಕ ಕಿರುಕುಳ ನೀಡುವ ದಿನವನ್ನಾಗಿ ಆಚರಿಸುತ್ತಿರುವುದು ಖೇಧದ ಸಂಗತಿಯಾಗಿದೆ. ಈ ದಿನ ಪಾರ್ಟಿಯ ಹೆಸರಿನಲ್ಲಿ ಯುವಕ ಯುವತಿಯರು ಮದ್ಯಪಾನ, ದೂಮಪಾನ ಮಾಡುವುದು, ಡ್ರಗ್ ಮಾಪಿಯಾದಂತಹ ಕೃತ್ಯಗಳಿಗೆ ಬಲಿಯಾಗುವುದು ಮುಂತಾದ ಅನುಚಿತ ಘಟನೆಗಳ ಪ್ರಮಾಣ ಹೆಚ್ಚಳವಾಗುತ್ತಿದೆ. ಅಷ್ಟೇಅಲ್ಲದೇ ಈ ದಿನ ಸಮಿಕ್ಷೆಯ ಪ್ರಕಾರ ಗರ್ಭನಿರೋಧಕ ಮಾರಾಟ ಅಧಿಕ ವಾಗುತ್ತಿರುವುದು, ಅನೈತಿಕತೆ ಹೆಚ್ಚಾಗುತ್ತಿರುವುದರ ದ್ಯೋತಕವಾಗಿದೆ.
ಈ ದಿನ ಹುಡುಗಿಯರನ್ನು ಆಕರ್ಷಿಸಲು ವೇಗದಿಂದ ವಾಹನ ಓಡಿಸುವುದು ಮುಂತಾದ ದುರ್ಘಟನೆಗಳ ಪ್ರಮಾಣವು ಹೆಚ್ಚಾಗುತ್ತಿದೆ. ಈ ವ್ಯಾಲೆಂಟೈನ್ ದಿನದ ಕಾರಣ ಶಾಲಾ-ಕಾಲೇಜುಗಳ ಶೈಕ್ಷಣಿಕ ವಾತವರಣ ಹಾಳಾಗುವುದರ ಜೊತೆಗೆ ಕಾನೂನು ಸುವ್ಯವಸ್ಥೆಯ ಪ್ರಶ್ನೆಯು ನಿರ್ಮಾಣವಾಗುವ ಬೋಗವಾಧಿ ವೃತ್ತಿಯು ಹೆಚ್ಚಾಗಿ, ಸರಕಾರದ ಮೇಲೆ ಹೆಚ್ಚುವರಿ ಒತ್ತಡ ನಿರ್ಮಾಣವಾಗುತ್ತದೆ.
ಹಾಗಾಗಿ ಹಿಂದೂ ಜನಜಾಗೃತಿ ಸಮಿತಿಯು ಪ್ರೇಮಿಗಳ ದಿನದ ವಿರುದ್ಧ ಜನಜಾಗೃತಿ ಅಬಿಯಾನ ಮಾಡುವುದು, ಅದನ್ನು ತಡೆಯಲು ಅದಕ್ಕೆ ಪರ್ಯಾಯವಾಗಿ ಪೆಬ್ರುವರಿ 14 ರಂದು ಮಾತೃ-ಪಿತೃ ಪೂಜನೀಯ ದಿನವನ್ನು ಆಚರಿಸಲು ಆಯೋಜನೆ ಮಾಡುತ್ತಿವೆ.
ಈ ದೃಷ್ಟಿಯಿಂದ ಸಮಿತಿಯು ಈ ಮುಂದಿನ ಬೇಡಿಕೆ ಇಟ್ಟಿತು.
1. ವ್ಯಾಲೆಂಟೈನ್ ದಿನದಂದು ವಿಶೇಷ ಪೋಲಿಸ್ ದಳ ರಚಿಸಿ ಶಾಲಾ-ಕಾಲೇಜುಗಳಲ್ಲಿ ಅನುಚಿತ ಕೃತ್ಯ ಮಾಡುವವರ ಮೇಲೆ, ವೇಗದಿಂದ ವಾಹನ ಓಡಿಸುವವರ ಮೇಲೆ ಕ್ರಮ ಜರುಗಿಸುವುದು.
2. ಪ್ರೇಮಿಗಳ ದಿನದಂದು ನಡೆಯುವ ತಪ್ಪು ಪ್ರಕಾರಗಳನ್ನು ಗಮನದಲ್ಲಿರಿಸಿ ಪಾರ್ಕ್, ಮುಂತಾದ ಸ್ಥಳಗಳಲ್ಲಿ ಅಯೋಗ್ಯ ಕೃತಿಗಳನ್ನು ತಡೆಯುವುದು.
3. ಇಂತಹ ಅಯೋಗ್ಯ ಆಚರಣೆಗಳಿಗೆ ಪ್ರೋತ್ಸಾಹ ನೀಡದಂತೆ ಶಾಲಾ ಕಾಲೇಜುಗಳಿಗೆ ನಿರ್ಧೇಶನವನ್ನು ನೀಡುವುದು.