ಬೆಂಗಳೂರು : ರಾಜ್ಯದಲ್ಲಿ ಈಗಾಗಲೇ ಒಮಿಕ್ರಾನ್ ಸೋಂಕು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಮಹತ್ವದ ಕ್ರಮಗಳನ್ನು ಕೈಗೊಂಡಿದ್ದು, ಶಾಲಾ-ಕಾಲೇಜು ಮಕ್ಕಳ ಪೋಷಕರು, ಸಿಬ್ಬಂದಿಗೂ 2 ಡೋಸ್ ಲಸಿಕೆ ಕಡ್ಡಾಯ ಮಾಡಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಒಮಿಕ್ರಾನ್ ಸೋಂಕು ವೇಗವಾಗಿ ಹರಡುತ್ತೆ ಎನ್ನುತ್ತಿದ್ದಾರೆ.ಇನ್ನು ಮೊದಲ ಕೊರನಾ ಪ್ರಕರಣಗಳಿಗೆ ಕ್ಲಸ್ಟರ್ ಎಂದು ಕರೆಯಲಾಗುತ್ತಿತ್ತು. ಈಗ 3 ಪ್ರಕರಣಗಳಿಗೆ ಕ್ಲಸ್ಟರ್ ಮಾಡಲಾಗುತ್ತಿದೆ. ಅಪಾರ್ಟ್ ಮೆಂಟ್ ಭೇಟಿಗೂ ಇನ್ಮುಂದೆ 2 ಡೋಸ್ ಲಸಿಕೆ ಕಡ್ಡಾಯ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಆದರೆ ಒಮಿಕ್ರಾನ್ ಪರಿಣಾಮ ಮಾತ್ರ ಕಡಿಮೆ ಇದೆ. ಒಮಿಕ್ರಾನ್ ಸೋಂಕಿನ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಒಮಿಕ್ರಾನ್ ಸೋಂಕಿಗೆ ಹೇಗೆ ಚಿಕಿತ್ಸೆ ನೀಡಬೇಕು ಎಂಬುದರ ಕುರಿತು ಮಾಹಿತಿ ಪಡೆಯಲಾಗುತ್ತಿದೆ ಎಂದರು.