ರಾಜ್ಯದಾದ್ಯಂತ ಎಲ್ಲಾ ಶಾಲೆಗಳಲ್ಲಿ ಹಾಗೂ ಶಿಕ್ಷಣ ಇಲಾಖೆಯ ಕಛೇರಿಗಳಿಗೆ ಮಾನ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು ಭೇಟಿ ನೀಡಿದ ಸಂದರ್ಭದಲ್ಲಿ ಅವರಿಗೆ ಗೌರವಾರ್ಥ ಪ್ಲಾಸ್ಟಿಕ್ ಸುತ್ತಿದ ಹೂಗುಚ್ಛ, ಪ್ಲಾಸ್ಟಿಕ್ ಹಾಳೆ/ಕಾಗದದಿಂದ ಪ್ಯಾಕ್ ಮಾಡಿದ ಪುಸ್ತಕಗಳನ್ನು ನೀಡುತ್ತಿದ್ದು, ಸರ್ಕಾರಿ ಅಧಿಸೂಚನೆ ಸಂಖ್ಯೆ: ಅಪಜೀ.೧೭. ಇಪಿಸಿ.೨೦೧೨ ಮಾ.೧೧, ೨೦೧೬ರನ್ವಯ ರಾಜ್ಯದಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ನಿಷೇಧಿಸಲಾಗಿರುತ್ತದೆ. ಅದರಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ತಿಳಿಸಲಾಗಿದೆ.
ಸರ್ಕಾರದ ಆದೇಶಗಳಲ್ಲಿ ಪ್ಲಾಸ್ಟಿಕ್ ಕ್ಯಾರಿಬ್ಯಾಗ್, ಭಿತ್ತಿಪತ್ರ ತೋರಣ, ಪ್ಲಸ್ಟಿಕ್ ಬಾವುಟ, ಪ್ಲೆಕ್ಸ್, ಪ್ಲಾಸ್ಟಿಕ್ ತಟ್ಟೆ, ಲೋಟ, ಚಮಚ ಹಾಗೂ ಥರ್ಮಕೋಲ್, ಪ್ಲಾಸ್ಟಿಕ್ ಬಿಟ್ಸಗಳಿಂದ ತಕಾರಾದ ವಸ್ತುಗಳ ಬಳಕೆಯನ್ನು ನಿಷೇಧಿಸಲಾಗಿರುತ್ತದೆ.
ರಾಜ್ಯದ ಎಲ್ಲಾ ಶೈಕ್ಷಣಿಕ ಸಂಸ್ಥೆಗಳು/ಶಾಲೆಗಳಲ್ಲಿ ನಡೆಯುವ ಸಭೆ ಸಮಾರಂಭಗಳಲ್ಲಿ ಪ್ಲಾಸ್ಟಿಕ್ನಿಂದ ತಯಾರಾದ ವಸ್ತುಗಳು ಬಳಕೆಗೆ ನಿರ್ಬಂಧಿಸಿದೆ. ಈ ಹಿನ್ನೆಲೆ ರಾಜ್ಯದ ಎಲ್ಲಾ ಉಪನಿರ್ದೇಶಕರು ಈ ಕಾರ್ಯ ಪರಿಣಾಮಕಾರಿಯಾಗಿ ಜಾರಿ ಆಗುವಂತೆ ಕ್ರಮ ಕೈಗೊಳ್ಳಲು ಸೂಚನೆ ನೀಡಿದೆ.