ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಸಂಬಂಧ ಬಂಧಿಯಾಗಿದ್ದ ಕಾಂಗ್ರೆಸ್ ಶಾಸಕ ಡಿ.ಕೆ.ಶಿವಕುಮಾರ್ ಅವರಿಗೆ ದೆಹಲಿ ಹೈಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.
ಡಿಕೆಶಿ ಆರೋಗ್ಯ ಸ್ಥಿತಿ ಗಮನಿಸಿ ಕೋರ್ಟ್ ಜಾಮೀನು ನೀಡಿದೆ. ಇದರ ಜತೆಗೆ 25 ಲಕ್ಷ ಮೌಲ್ಯದ ಎರಡು ಬಾಂಡ್ ಹಾಗೂ ಪಾಸ್ ಪೋರ್ಟ್ ನ್ನು ಒಪ್ಪಿಸಿ ವಿಚಾರಣೆಗೆ ಹಾಜರಾಗುವಂತೆ ಎಂದು ಕೋರ್ಟ್ ಷರತ್ತು ಬದ್ಧ ಜಾಮೀನು ವಿಧಿಸಿದೆ.
ಇಂದು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ತಿಹಾರ್ ಜೈಲಿನಲ್ಲಿ ಡಿಕೆಶಿಯನ್ನು ಭೇಟಿಯಾಗಿ ಮಾತುಕತೆ ನಡೆಸಿದರು.