News Karnataka Kannada
Friday, May 10 2024
ಬೆಂಗಳೂರು ನಗರ

ಶಿಕ್ಷಣ ಬೇಕಾದರೇ ಅಲ್ಲಿನ ನಿಯಮಗಳನ್ನು ಪಾಲಿಸಬೇಕು: ಸಚಿವ ಬಿ.ಸಿ.ನಾಗೇಶ್ 

B C Nagesh Educational Minister
Photo Credit :

ಬೆಂಗಳೂರು: ರಾಜ್ಯದಲ್ಲಿ ಧರ್ಮ  ಪಾಲನೆ ಮಾಡುವುದಕ್ಕೆ ನಮ್ಮ ವಿರೋಧವಿಲ್ಲ. ನಾವು ವಿರೋಧಿಸುವುದು ಇಲ್ಲ. ಶಿಕ್ಷಣ ಬೇಕಾದರೇ ಅಲ್ಲಿನ ನಿಯಮಗಳನ್ನು ಪಾಲಿಸಬೇಕು ಶಿಕ್ಷಣ ಬೇಕಾದವರು ಸಮವಸ್ತ್ರ ಧರಿಸಿಯೇ ಶಾಲೆಗೆ ಬರಬೇಕು ಎಂಬುದಾಗಿ ಶಿಕ್ಷಣ ಸಚಿವರು ಖಡಕ್ ಸೂಚನೆ ನೀಡಿದ್ದಾರೆ.

ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್  ಅವರು, ಮಾಜಿ ಸಿಎಂ ಸಿದ್ಧರಾಮಯ್ಯಗೆ ನಾಚಿಕೆ ಆಗಬೇಕು. ಒಂದು ಸಮುದಾಯದ ಮತವನ್ನು ಪಡೆಯೋದಕ್ಕೆ ಅವರು ಬೇಕಾದಂತೆ ಮಾತನಾಡುತ್ತಿದ್ದಾರೆ. ಅವರ ಅವಧಿಯಲ್ಲಿಯೇ ಈ ಸಮವಸ್ತ್ರ ಮಾಡಿದ್ದು. ಇದರ ಹಿಂದೆ ನಮ್ಮ ಯಾವುದೇ ಪಿತೂರಿಯಿಲ್ಲ ಎಂಬುದಾಗಿ ಸ್ಪಷ್ಟ ಪಡಿಸಿದರು.

ಶಿಕ್ಷಣ ಬೇಕಾದವರು ಶಾಲೆಗೆ  ಸಮವಸ್ತ್ರ ಧರಿಸಿಯೇ ಬರಬೇಕು. ಅದರ ಹೊರತಾಗಿ ಬೇರಾವುದೇ ಉಡುಪು ಧರಿಸೋದಕ್ಕೆ ಅವಕಾಶವಿಲ್ಲ. ಧರ್ಮ ಪಾಲನೆ ಮಾಡುವುದಕ್ಕೆ ನಾವು ವಿರೋಧಿಸಿಲ್ಲ. ಶಿಕ್ಷಣ ಬೇಕಾದ್ರೆ ಅಲ್ಲಿಯ ನಿಮಯದಂತೆ ಬರಬೇಕು. ಹೈಕೋರ್ಟ್ ತೀರ್ಪು ಆಧರಿಸಿ, ಸಮವಸ್ತ್ರ ಸಂಹಿತಿಯ ನಿಯಮದ ಬಗ್ಗೆ ತೀರ್ಮಾನ ಕೈಗೊಳ್ಳುತ್ತೇವೆ. ಅಲ್ಲಿಯವರೆಗೆ ಈಗಿರುವ ನಿಯಮ ಮುಂದುವರೆಯಲಿದೆ ಎಂದು ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು