ಬೆಂಗಳೂರು: ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ‘ಮುಸಲ್ಮಾನ್ ಗೂಂಡಾಗಳು ಕೊಲೆ ಮಾಡಿದ್ದಾರೆ’ ಎಂದು ಬೆಂಗಳೂರಿನಲ್ಲಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.
ಶಿವಮೊಗ್ಗದ ಸೀಗೆಹಟ್ಟಿಯ ದೊಡ್ಡಪೇಟೆ ಪೊಲೀಸ್ ಠಾಣೆ ಬಳಿ ಹಿಂದೂ ಕಾರ್ಯಕರ್ತ ಹರ್ಷ(24) ಎಂಬ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ಇದಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಶಿವಮೊಗ್ಗದಲ್ಲಿ ಎಂದೂ ಅವರು ಬಾಲ ಬಿಚ್ಚಿರಲಿಲ್ಲ. ಇಂತಹ ಗೂಂಡಾಗಳನ್ನು ನಾವು ಎಂದೂ ಬಿಡಲ್ಲ ಎಂದು ಹೇಳಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಪ್ರಚೋದನಕಾರಿ ಹೇಳಿಕೆಯಿಂದ ಪ್ರೇರಿತರಾಗಿ ಮುಸ್ಲಿಂ ಗೂಂಡಾಗಳು ಈ ಕೃತ್ಯವೆಸಗಿದ್ದಾರೆ ಎಂದು ಡಿ.ಕೆ. ಶಿವಕುಮಾರ್ ಪ್ರಚೋದನಕಾರಿ ಹೇಳಿಕೆ ನೀಡಿದ್ದರು.
ಇದರಿಂದಲೇ ಗೂಂಡಾಗಳಿಗೆ ಪ್ರಚೋದನೆ ಸಿಕ್ಕಿದೆ ಎಂದು ಗಂಭೀರವಾಗಿ ಆರೋಪಿಸಿದ್ದಾರೆ. ದುಷ್ಕರ್ಮಿಗಳನ್ನು ಶೀಘ್ರದಲ್ಲಿ ಬಂಧಿಸಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.