ಬೆಂಗಳೂರು: ಬೆಂಗಳೂರು ನಗರದ ಹೃದಯ ಭಾಗದಲ್ಲಿರುವ ಕಂಠೀರವ ಕ್ರೀಡಾಂಗಣದಲ್ಲಿ ಅತ್ಯಾಧುನಿಕ ಗುಣಮಟ್ಟದ ಸಿಂಥೆಟಿಕ್ ಟ್ರ್ಯಾಕ್ ನಿರ್ಮಿಸಲಾಗಿದ್ದು, ಶೀಘ್ರದಲ್ಲೇ ಕ್ರೀಡಾಪಟುಗಳ ಬಳಕೆಗೆ ಅನುವು ಮಾಡಿಕೊಡಲಾಗುವುದು ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ ಅವರು ತಿಳಿಸಿದರು .
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಪ್ರಗತಿ ಪರಿಶೀಲನೆ ಮಾಡಿದ ನಂತರ ಶ್ರೀ ಕಂಠೀರವ ಕ್ರೀಡಾಂಗಣಕ್ಕೆ ಭೇಟಿ ನೀಡಿ ಪ್ರಗತಿ ಪರಿಶೀಲನೆ ನಡೆಸಿದರು. ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಅವರು ಕ್ರೀಡಾಂಗಣದಲ್ಲಿ ಈಗಾಗಲೆ ನಿರ್ಮಿಸಿದ್ದ ಸಿಂಥಟಿಕ್ ಟ್ರ್ಯಾಕ್ ಹಾಳಾಗಿದ್ದ ಪರಿಣಾಮವಾಗಿ ಹೊಸ ಸಿಂಥೆಟಿಕ್ ಟ್ರ್ಯಾಕ್ ನಿರ್ಮಿಸಲು ಕಾಮಗಾರಿ ಆರಂಭಿಸಲಾಗಿತ್ತು. ಎರಡು ವರ್ಷಗಳಿಂದ ನಡೆದ ಸಿಂಥೆಟಿಕ್ ಟ್ರ್ಯಾಕ್ ಅಭಿವೃದ್ಧಿ ಕಾರ್ಯ ಮುಕ್ತಾಯವಾಗಿದೆ.
ಅಥ್ಲೆಟಿಕ್ ಕ್ರೀಡಾಪಟುಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ, ದೆಹಲಿ ಮೂಲದ ಸಂಸ್ಥೆಗೆ ಸಿಂಥಟೆಕ್ ಕಾಮಗಾರಿಯ ಕೆಲಸ ನಿರ್ವಹಣೆ ವಹಿಸಿದ್ದು, ಸದರಿ ಸಂಸ್ಥೆಯವರು ರೂ. 5 ಕೋಟಿ ವೆಚ್ಚದಲ್ಲಿ ಅಮೆರಿಕಾದಿಂದ ಹೊಸ ಸಿಂಥೆಟಿಕ್ ಟ್ರ್ಯಾಕ್ ನ್ನು ತರಿಸಿ ಕಂಠೀರವ ಕ್ರೀಡಾಂಗಣದಲ್ಲಿ ಅಳವಡಿಸಿದ್ದಾರೆ. ಕಾಮಗಾರಿಯು ಉತ್ತಮ ಗುಣಮಟ್ಟವನ್ನು ಹೊಂದಿದೆ ಎಂದು ತಿಳಿಸಿದರು.
ಹಳೇ ಸಿಂಥೆಟಿಕ್ ಟ್ರ್ಯಾಕ್ ಹಾಳಾಗಿದ್ದರಿಂದ ಕ್ರೀಡಾಪಟುಗಳ ಅಭ್ಯಾಸಕ್ಕೆ ಹಾಗೂ ಟೂರ್ನಿಗಳ ಆಯೋಜನೆಗೆ ಸಮಸ್ಯೆ ಆಗಿತ್ತು. ಈಗ ಹೊಸ ಸಿಂಥೆಟಿಕ್ ಟ್ರ್ಯಾಕ್ ನಿರ್ಮಿಸಿರುವುದರಿಂದ ಕ್ರೀಡಾಪಟುಗಳ ಅಭ್ಯಾಸಕ್ಕೆ, ಟೂರ್ನಿಗಳ ಆಯೋಜನೆಗೆ ಅನುಕೂಲವಾಗಲಿದೆ, ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್ ಸೇರಿದಂತೆ ರಾಷ್ಟ್ರೀಯ, ಅಂತಾರಾಷ್ಟ್ರೀಯ ಕ್ರೀಡಾಕೂಟಗಳನ್ನು ಆಯೋಜಿಸಲು ಅನುಕೂಲ ಆಗಲಿದೆ.
ನಮ್ಮ ಸರ್ಕಾರ ಕ್ರೀಡೆಗೆ ಸಾಕಷ್ಟು ಉತ್ತೇಜನ ನೀಡುತ್ತಿದ್ದು, ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡುವ ಹತ್ತಾರು ಯೋಜನೆಗಳನ್ನು ರೂಪಿಸಿದೆ. ಒಲಂಪಿಕ್ಸ್ ನಲ್ಲಿ ಹೆಚ್ಚಿನ ಪದಕಗಳನ್ನು ಗೆಲ್ಲಬೇಕೆಂಬ ಗುರಿ ಹೊಂದಿದ್ದು, ಈಗಾಗಲೇ ಅಮೃತ ಕ್ರೀಡಾ ದತ್ತು ಯೋಜನೆಯಲ್ಲಿ ಕ್ರೀಡಾಪಟುಗಳಿಗೆ ವಿಶೇಷ ತರಬೇತಿ ನೀಡಲಾಗುತ್ತಿದೆ. ಸಿದ್ಧಿಮಕ್ಕಳಲ್ಲಿರುವ ವಿಶೇಷ ಕ್ರೀಡಾ ಪ್ರತಿಭೆಯನ್ನು ಗುರುತಿಸಿ ತರಬೇತಿ ನೀಡಲಾಗುತ್ತಿದೆ. ಈಗ ಹೊಸ ಸಿಂಥೆಟಿಕ್ ಟ್ರ್ಯಾಕ್ ನಿರ್ಮಿಸಿರುವುದರಿಂದ ಅಥ್ಲೆಟಿಕ್ಸ್ಗಳಿಗೆ ಅನುಕೂಲವಾಗಲಿದ್ದು, ಶೀಘ್ರದಲ್ಲೇ ಹೊಸ ಟ್ರ್ಯಾಕ್ ಉದ್ಘಾಟಿಸಲಾಗುವುದು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಕರ್ನಾಟಕ ಒಲಂಪಿಕ್ಸ್ ಅಸೋಸಿಯೇಷನ್ ಅಧ್ಯಕ್ಷರಾದ ಡಾ.ಕೆ. ಗೋವಿಂದ ರಾಜು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಆಯುಕ್ತರಾದ ಡಾ. ಗೋಪಾಲಕೃಷ್ಣ ಐ.ಎ.ಎಸ್ , ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಜಂಟಿ ನಿರ್ದೇಶಕ ರಮೇಶ್ ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಆಮ್ ಆದ್ಮಿ ಪಕ್ಷಕ್ಕೆ ವಿದೇಶಿ ಮೂಲಗಳಿಂದ 7 ಕೋಟಿ ರೂ.ಗೂ ಹೆಚ್ಚು ದೇಣಿಗೆ ಸಿಕ್ಕಿರುವ ಬಗ್ಗೆ ಎಫ್ಸಿಆರ್ಎ ತನಿಖೆಯನ್ನು ಕೋರಿ…
ಕೆರೆಯ ಬಳಿ ಆಸ್ವಸ್ಥಗೊಂಡು ಬಿದ್ದಿದ್ದ ಆನೆ ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿರುವ ಘಟನೆ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ, ಹೆಡಿಯಾಲ ಉಪ-ವಿಭಾಗ…
ಒಂದು ವರ್ಷ ಅಧಿಕಾರ ಪೂರೈಸುವ ಹೊತ್ತಿಗೆ ನೂರೊಂದು ಸಮಸ್ಯೆಗಳನ್ನು ತಂದುಕೊಂಡಿದೆ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ ರಾಜ್ಯ ಸರ್ಕಾರದ…
ಆಕಸ್ಮಿಕವಾಗಿ ಸಂಭವಿಸುವ ಕಾಯಿಲೆಗಳಿಗೆ ಸೂಕ್ತ ಚಿಕಿತ್ಸೆ ಪಡೆದುಕೊ ಳ್ಳುವ ಸಲುವಾಗಿ ಸರ್ಕಾರ ಜಾರಿಗೊಳಿಸಿರುವ ಯಶಸ್ವಿನಿ ಯೋಜನೆಯನ್ನು ಸಮರ್ಪಕವಾಗಿ ಬಳಸಿಕೊಳ್ಳ ಬೇಕು…
ರಾಜ್ಯದಲ್ಲಿ ಭೀಕರ ಬರಗಾಲದಿಂದ ಕಂಗೆಟ್ಟಿರುವ ರೈತರಿಗೆ ರಾಜ್ಯ ಸರಕಾರ ಅಲ್ಪ ಮಟ್ಟಿಗೆ ಪರಿಹಾರ ನೀಡಿ ನಿಟ್ಟುಸಿರು ಬಿಡುವಂತೆ ಮಾಡಿದೆ.ಆದರೆ ಅಫಜಲಪುರ…
ಹುಬ್ಬಳ್ಳಿಯ ನೇಹಾ ಹಿರೇಮಠ್ ಹತ್ಯೆ ಪ್ರಕರಣ ಬೆನ್ನಲ್ಲೇ ಇದೀಗ ಅಂಜಲಿ ಅಂಬಿಗೇರ ಕೊಲೆ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದೆ. ಈ ಬಗ್ಗೆ…