ಬೆಂಗಳೂರು: ಈಗಾಗಲೇ ಹಲವಾರು ವಾದ-ವಿವಾದಗಳಿಗೆ ಕಾರಣವಾಗಿರುವ ಖಾಸಗಿ ಶಾಲೆ ಶುಲ್ಕ ವಿಚಾರದಲ್ಲಿ ಮತ್ತೊಂದು ವಾದಕ್ಕೆ ಅಡಿಪಾಯ ಸಜ್ಜಾಗುತ್ತಿದೆ. ಶುಲ್ಕ ಶೇಕಡ 30ರಷ್ಟು ಕಡಿಮೆಗೊಳಿಸಿ ಎಂಬ ಆದೇಶದ ಕುರಿತು ಫೆಬ್ರವರಿ 23ರಂದು ಖಾಸಗಿ ಶಾಲೆಗಳ ಒಕ್ಕೂಟ ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದಾರೆ.
ಆರ್ಥಿಕ ಕುಸಿತದ ಪರಿಣಾಮವಾಗಿ ಪಾಲಕರು ಶುಲ್ಕ ಕಡಿಮೆ ಮಾಡುವಂತೆ ಸರ್ಕಾರಕ್ಕೆ ಮನವಿ ಮಾಡುತ್ತಿದ್ದಾರೆ. ಇತ್ತ ಖಾಸಗಿ ಶಾಲೆಗಳ ಶಿಕ್ಷಕರಿಗೆ ಆರು ತಿಂಗಳಿಂದ ವೇತನವೂ ಇಲ್ಲದೆ- ಕೆಲಸವೂ ಇಲ್ಲದೆ ಆರ್ಥಿಕ ಸಮಸ್ಯೆ ಎದುರಿಸುತ್ತಿದ್ದಾರೆ. ಈ ನಡುವೆ ರಾಜ್ಯ ಸರ್ಕಾರ ಖಾಸಗಿ ಶಾಲೆಗಳ ಶುಲ್ಕವನ್ನು ಶೇ.30 ಕಡಿಮೆ ಮಾಡಿ ಆದೇಶ ಹೊರಡಿಸಿದೆ. ಅಲ್ಲದೆ ಯಾವುದೇ ಅಭಿವೃದ್ಧಿ ಶುಲ್ಕವನ್ನು ಪಡೆಯುವಂತಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.
ಇಂತಹ ನಿಯಮಗಳನ್ನು ವಿಧಿಸಿದರೆ ಖಾಸಗಿ ಶಾಲೆಗಳನ್ನು ನಡೆಸುವುದು ಹಾಗೂ ಶಿಕ್ಷಕರಿಗೆ ವೇತನವನ್ನು ನೀಡುವುದು ಬಹಳ ಕಷ್ಟವಾಗುತ್ತದೆ ಎಂದು ಹೇಳುತ್ತಿರುವ ಖಾಸಗಿ ಶಾಲೆಗಳ ಒಕ್ಕೂಟ ಸರ್ಕಾರದ ವಿರುದ್ಧ ಕ್ಯಾಮ್ಸ್, ಮಿಕ್ಸಾ, ಮಾಸ್, ಕುಸುಮ, ಸಿಬಿಎಸ್ಇ ಹಾಗೂ ಐಸಿಎಸ್ಇ ಶಾಲೆಗಳ ಒಕ್ಕೂಟವು ಫೆ.23ರಂದು ಪ್ರತಿಭಟನೆ ಹಮ್ಮಿಕೊಂಡಿದೆ.
ಆದರೆ ಶುಲ್ಕ ಕಡಿತ ವಿಚಾರದಲ್ಲಿ ಶಿಕ್ಷಣ ಇಲಾಖೆಯ ನಿರ್ಧಾರವನ್ನು ಸ್ವಾಗತಿಸಿರುವ ರುಪ್ಸಾ ರಾಜ್ಯಾಧ್ಯಕ್ಷ ಲೋಕೇಶ್ ರುಪ್ಸಾದಲ್ಲಿ 13 ಸಾವಿರಕ್ಕೂ ಹೆಚ್ಚು ಬಜೆಟ್ ಶಾಲೆಗಳಿವೆ. ಶೇ.30 ಶುಲ್ಕ ಕಡಿತದ ಬಗ್ಗೆ ಯಾವುದೇ ತಕರಾರಿ ಇಲ್ಲ ಎಂದಿದ್ದಾರೆ. ಅಲ್ಲದೆ, ಫೆ. 23ರಂದು ನಡೆಯುವ ಪ್ರತಿಭಟನೆ ನಮ್ಮ ಬೆಂಬಲ ಇಲ್ಲ ಎಂದು ಪ್ರತಿಭಟನೆಯ ಕುರಿತಾದ ತಮ್ಮ ಅಭಿಪ್ರಾಯವನ್ನು ಸ್ಪಷ್ಟಪಡಿಸಿದ್ದಾರೆ.
ಇಂದು ಶಬ್ದ ಮಾಲಿನ್ಯ ಮಾತ್ರವಲ್ಲದೆ ಪ್ರತಿಯೊಂದು ಮಾಲಿನ್ಯವು ಪರಿಸರದ ಗುಣಮಟ್ಟಕ್ಕೆ ಮಾತ್ರವಲ್ಲದೆ ಮನುಷ್ಯನ ಜೀವನಕ್ಕೂ ಗಂಭೀರ ಅಪಾಯವಾಗಿದೆ. ಶಬ್ದ ಮಾಲಿನ್ಯವು…
ಗುದನಾಳದಲ್ಲಿ ಬಚ್ಚಿಟ್ಟು 54 ಲಕ್ಷ ರೂ. ಮೌಲ್ಯದ ಚಿನ್ನವನ್ನು ಅಕ್ರಮವಾಗಿ ಸಾಗಾಟ ಮಾಡಿದ ಘಟನೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ನಡೆದಿದೆ.…
ಐಪಿಎಲ್ ಇತಿಹಾಸದಲ್ಲಿ ಕೂಲ್ ಕ್ಯಾಪ್ಟನ್ ಎಂ.ಎಸ್. ಧೋನಿ ಹೊಸ ದಾಖಲೆಯೊಂದನ್ನು ಬರೆದಿದ್ದಾರೆ. ಕಳೆದ ದಿನ (ಏ.28) ಚೆನ್ನೈನ ಎಂ.ಎ. ಚಿದಂಬರಂ…
ಮುಸ್ಲಿಮರು ಶೀಘ್ರದಲ್ಲೇ ಬಹುಸಂಖ್ಯಾತರಾಗುತ್ತಾರೆ ಎಂಬ ಭಯವನ್ನು ನರೇಂದ್ರ ಮೋದಿ ಇನ್ನೂ ಹಿಂದೂಗಳಲ್ಲಿ ಹರಡಲು ಪ್ರಯತ್ನಿಸುತ್ತಿದ್ದಾರೆ ಎಂದು ಆಲ್ ಇಂಡಿಯಾಮಜ್ಲಿ ಸ್-ಎ-ಇತ್ತೆಹಾದುಲ್…
ಛತ್ತೀಸ್ಗಢದ ಬೆಮೆತಾರಾದ ಕಥಿಯಾ ಪೆಟ್ರೋಲ್ ಪಂಪ್ ಬಳಿ ಪಿಕಪ್ ಟ್ರಕ್ ರಸ್ತೆ ಬದಿ ನಿಲ್ಲಿಸಿದ್ದ ಟಾಟಾ 407 ವಾಹನಕ್ಕೆ ಡಿಕ್ಕಿ…
ತಮಿಳುನಾಡಿನ ಚೆನ್ನೈನ ಅವಡಿಯ ತಿರುಮಲ್ಲೈವೋವಲ್ನಲ್ಲಿರುವ ಅಪಾರ್ಟ್ಮೆಂಟ್ನ ಕಿಟಕಿಯಿಂದ ಏಳು ತಿಂಗಳ ಮಗುವೊಂದು ವಿಂಡೋ ಪೋರ್ಚ್ ಮೇಲೆ ಬಿದ್ದ ಘಟನೆ ನಡೆದಿದೆ.