News Karnataka Kannada
Monday, April 29 2024
ಬೆಂಗಳೂರು ನಗರ

ಶೈಕ್ಷಣಿಕ ವರ್ಷದಿಂದ ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ

My
Photo Credit :

ಕೆ.ಆರ್.ಪೇಟೆ: ಸ್ವಾವಲಂಬನೆ, ಸ್ವಾಭಿಮಾನದ ಶಿಕ್ಷಣ ನೀಡುವ ಸಲುವಾಗಿ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರೂಪಿಸಲಾಗಿದ್ದು ಶೈಕ್ಷಣಿಕ ವರ್ಷದಿಂದ ಒಂದು ಮತ್ತು ಎರಡನೇ ತರಗತಿಗಳನ್ನು ರಾಜ್ಯದ ಇಪ್ಪತ್ತು ಸಾವಿರ ಶಾಲೆಗಳಲ್ಲಿ ಜಾರಿಗೊಳಿಸಲಾಗುತ್ತಿದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದರು.

ಪಟ್ಟಣದ ಹೊರವಲಯದಲ್ಲಿರುವ ಶ್ರೀ ಜಯಮ್ಮರಾಮಸ್ವಾಮಿ ಸಮುದಾಯ ಭವನದಲ್ಲಿ ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಏರ್ಪಡಿಸಿದ್ದ ಶೈಕ್ಷಣಿಕ ವಿಚಾರಗೋಷ್ಟಿ ಹಾಗೂ ನಿವೃತ್ತ ಶಿಕ್ಷಕರಿಗೆ ಅಭಿನಂದನಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ನೂತನ ರಾಷ್ಟ್ರೀಯ ಶಿಕ್ಷಣ ನೀತಿ ವಿದ್ಯಾರ್ಥಿಗಳ ಮುಂದಿನ ಸ್ವಾವಲಂಬನೆಯ ಬದುಕನ್ನು ಅಭಿವೃದ್ದಿಪಡಿಸಲು ಹಾಗೂ ಕೌಶಲ್ಯಾಧಾರಿತವಾಗಿ ಶಿಕ್ಷಣವನ್ನು ರೂಪಿಸಲಾಗಿದೆ ಎಂದರು.

ಕೋವಿಡ್ ಸಮಯದಲ್ಲಿ ತಜ್ಞರು ಏನೇ ಎಚ್ಚರಿಕೆ ಕೊಟ್ಟರೂ ಶಿಕ್ಷಣ ಇಲಾಖೆಯಲ್ಲಿ ಕೆಲಸ ನಿರ್ವಹಿಸುವ ಒಬ್ಬರೇ ಶಿಕ್ಷಕರು ಶಾಲಾ ಪ್ರಾರಂಭೋತ್ಸವಕ್ಕೆ ವಿರೋಧ ವ್ಯಕ್ತಪಡಿಸಲಿಲ್ಲ ಅದು ನನ್ನ ಇಲಾಖೆಗೆ ನೀವು ನೀಡುತ್ತಿರುವ ಸಹಕಾರ ಎಂಥದ್ದು ಎನ್ನುವುದನ್ನು ಸೂಚಿಸುತ್ತದೆ. ಕಳೆದ ಎರಡು ವರ್ಷಗಳಿಂದ  ಕೋವಿಡ್ ಕೆಲಸವನ್ನೂ ಮಾಡಿರುವ ನಿಮಗೆ ಅಭಿನಂದನೆಗಳು. ಪಧವೀಧರ ಶಿಕ್ಷಕರ ಸಮಸ್ಯೆ ನನ್ನ ಗಮನಕ್ಕೆ ಬಂದಿದ್ದು ಪರೀಕ್ಷೆ ಇಲ್ಲದೇ ಅವರನ್ನು ಮುಂಬಡ್ತಿಗೊಳಿಸಿ ನಂತರ ಅವರುಗಳಿಗೆ ತರಬೇತಿ ನೀಡಲು ಕ್ರಮವಹಿಸಲಾಗುವುದು ಎಂದು ತಿಳಿಸಿದರು.

ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ, ಸಚಿವ ಕೆ.ಸಿ.ನಾರಾಯಣಗೌಡ, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯಾದ್ಯಕ್ಷ ಶಂಭುಲಿಂಗನಗೌಡ ಪಾಟೀಲ್, ಕಾರ್ಯದರ್ಶಿ ಚಂದ್ರಶೇಖರ ನುಗ್ಗಲಿ, ಉಪಾದ್ಯಕ್ಷ ಕೆ.ನಾಗೇಶ್, ತಹಶೀಲ್ದಾರ್ ಎಂ.ವಿ.ರೂಪ, ಪುರಸಭಾ ಅಧ್ಯಕ್ಷೆ ಮಹಾದೇವಿನಂಜುಂಡ, ಪ್ರೊ.ಪಿ.ಕೆ.ರಾಜಶೇಖರ್, ಉಪನಿರ್ದೇಶಕ ಕೆ.ಜವರೇಗೌಡ, ಜಿಲ್ಲಾ ಪ್ರಾ.ಶಾ.ಶಿ ಅಧ್ಯಕ್ಷ ಮಂಜುನಾಥ್, ಕಾರ್ಯದರ್ಶಿ ರವಿಶಂಕರ್, ಕ್ಷೇತ್ರ ಶಿಕ್ಷಣಾಧಿಕಾರಿ ಬಸವರಾಜು, ಪುರಸಭಾ ಮುಖ್ಯಾಧಿಕಾರಿ ಕುಮಾರ್, ರಾಷ್ಟ್ರಪ್ರಶಸ್ತಿ ವಿಜೇತ ಶಿಕ್ಷಕ ಅಂ.ಚಿ.ಸಣ್ಣಸ್ವಾಮಿಗೌಡ ಸೇರಿದಂತೆ ತಾಲ್ಲೂಕಿನ ಶಿಕ್ಷಕ ಸಮೂಹ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು