News Karnataka Kannada
Wednesday, May 01 2024
ಬೆಂಗಳೂರು ನಗರ

ಶ್ರೀಕಿ ಮತ್ತು ಇತರರ ವಿರುದ್ಧ ವಾರಾಂತ್ಯದೊಳಗೆ ಚಾರ್ಜ್‌ಶೀಟ್ ಸಲ್ಲಿಸುವ ಸಾಧ್ಯತೆ

Shriki
Photo Credit :

ಬೆಂಗಳೂರು: ರಾಜ್ಯ ಸರ್ಕಾರದ ಇ-ಪ್ರೊಕ್ಯೂರ್‌ಮೆಂಟ್ ಸೆಲ್‌ನಿಂದ 11.5 ಕೋಟಿ ಹಣವನ್ನು ಹ್ಯಾಕ್ ಮಾಡಿ ಕಬಳಿಸಿದ ಹ್ಯಾಕರ್ ಶ್ರೀಕೃಷ್ಣ ಅಲಿಯಾಸ್ ಶ್ರೀಕಿ ಮತ್ತು ಇತರರ ವಿರುದ್ಧ ಅಪರಾಧ ತನಿಖಾ ದಳ (ಸಿಐಡಿ)ದ ಅಧಿಕಾರಿಗಳು ಈ ವಾರಾಂತ್ಯದೊಳಗೆ ಚಾರ್ಜ್‌ಶೀಟ್ ಸಲ್ಲಿಸುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ.

ವಿಚಾರವಣೆ ಆರೋಪಿ ಶ್ರೀಕಿ ಗುತ್ತಿಗೆದಾರನಾಗಿರುವ ತನ್ನ ಸ್ನೇಹಿತ ಮತ್ತು ಸಹ ಆರೋಪಿಯ ಒತ್ತಾಯದ ಮೇರೆಗೆ ಸರ್ಕಾರಿ ಪೋರ್ಟಲ್ ಅನ್ನು ಹ್ಯಾಕ್ ಮಾಡಿ ರೂ.11.55 ಕೋಟಿ ದರೋಡೆ ಮಾಡಿರುವುದಾಗಿ ಹೇಳಿಕೊಂಡಿದ್ದಾನೆಂದು ಮೂಲಗಳು ತಿಳಿಸಿವೆ. ಆದರೆ, ಈ ಸಂಬಂಧ ಸಿಐಡಿ ಅಧಿಕಾರಿಗಳು ಯಾವುದೇ ಮಾಹಿತಿಗಳನ್ನು ಬಹಿರಂಗಪಡಿಸದೆ, ತನಿಖೆಯನ್ನು ಬಿಗಿಗೊಳಿಸಿದ್ದಾರೆಂದು ತಿಳಿದುಬಂದಿದೆ.

2018ರ ಆಗಸ್ಟ್ ತಿಂಗಳಿನಲ್ಲಿ ಸಲ್ಮಾಪ್ ಬಳಸಿಕೊಂಡು ರಾಜ್ಯ ಸರ್ಕಾರದ ಇ-ಪ್ರೊಕ್ಯೂರ್‌ಮೆಂಟ್ ಸೆಲ್‌ನ್ನು ಹ್ಯಾಕ್ ಮಾಡಲು ಮೊದಲು ಪ್ರಯತ್ನಿಸಲಾಗಿತ್ತು. ಆದರೆ, ಅದು ಯಶಸ್ವಿಯಾಗಿರಲಿಲ್ಲ. 2019 ರಲ್ಲಿ ರಿಮೋಟ್ ಕೋಡ್ ಎಕ್ಸಿಕ್ಯೂಶನ್ ದುರ್ಬಳಕೆ ಮಾಡಿಕೊಂಡು ಬಿಡ್‌ದಾರರ ಮಾಹಿತಿ ಪಡೆದುಕೊಳ್ಳಲಾಗಿತ್ತು. ಬಳಿಕ ಬಿಡ್ ಗಳಿಗೆ ಸಂಬಂಧಿಸಿದಂತೆ ಎಲ್ಲಾ ಫೈಲ್, ವಹಿವಾಟಿನ ವಿವರಗಳು, ಪಾವತಿಯ ಮೊತ್ತ, ಐಎಫ್‌ಎಸ್‌ಸಿ ಕೋಡ್‌ಗಳು ಮತ್ತು ಬಿಡ್ದಾರರ ಖಾತೆ ಸಂಖ್ಯೆಗಳನ್ನು ಒಳಗೊಂಡಿರುವ ಎಕ್ಸೆಲ್ ಶೀಟ್ ಫೈಲ್‌ಗಳನ್ನು ಇತರೆ ಮಾಹಿತಿಗಳನ್ನು ಡೌನ್‌ಲೋಡ್ ಮಾಡಿಕೊಳ್ಳಲಾಗಿತ್ತು ಎಂದು ಶ್ರೀಕಿ ವಿಚಾರವಣೆ ಸ್ವಯಂಪ್ರೇರಿತವಾಗಿ ಹೇಳಿಕೆ ನೀಡಿದ್ದು, ಮಾಡಿದ್ದ ಅಪರಾಧವನ್ನು ಒಪ್ಪಿಕೊಂಡಿದ್ದಾರೆಂದು ಮೂಲಗಳು ತಿಳಿಸಿವೆ.

ಈ ನಡುವೆ ಜಾರಿ ನಿರ್ದೇಶನಾಲಯವು ಸಿಸಿಬಿಗೆ ಪತ್ರ ಬರೆದಿದ್ದು, ಶ್ರೀಕಿ ಪ್ರಕರಣದ ಪ್ರಮುಖ ಆರೋಪಿಯಾಗಿದ್ದು, ಬಿಟ್ ಕಾಯಿನ್ ಹಗರಣ ಪ್ರಕರಣ ಸಂಬಂಧ ಮಾಹಿತಿಗಳನ್ನು ನೀಡುವಂತೆ ಮನವಿ ಮಾಡಿಕೊಂಡಿದೆ ಎಂದು ತಿಳಿದುಬಂದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು