News Karnataka Kannada
Saturday, May 04 2024
ಬೆಂಗಳೂರು ನಗರ

ಸಂಕ್ರಾಂತಿಗೆ ಸಂಪುಟ ವಿಸ್ತರಣೆ

Photo Credit :

ಸಂಕ್ರಾಂತಿಗೆ ಸಂಪುಟ ವಿಸ್ತರಣೆ

ಬೆಂಗಳೂರು: ಜನವರಿ 13 ಅಥವಾ 14 ರಂದು  ಸಂಪುಟ ವಿಸ್ತರಣೆ ಮಾಡಲಾಗುವುದು ಎಂದು‌ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

ಮಾಜಿ ಪ್ರಧಾನಿ ದಿವಂಗತ ಲಾಲ್ ಬಹದ್ದೂರ್ ಶಾಸ್ತ್ರಿ ಅವರ 54ನೇ ಪುಣ್ಯ ತಿಥಿ ಅಂಗವಾಗಿ ಇಂದು ವಿಧಾನಸೌಧದಲ್ಲಿರುವ ಅವರ ಪ್ರತಿಮೆಗೆ  ಮಾಲಾರ್ಪಣೆ ಮಾಡಿದ ಬಳಿಕ ಅವರು‌ ಸುದ್ದಿಗಾರರ ಜೊತೆ ಮಾತನಾಡಿ ಸಂಕ್ರಾಂತಿಗೆ ಸಂಪುಟದ ವಿಸ್ತರಣೆ ಮಾಡಲಾಗುವುದು ಇಂದು ಸೂಚನೆ ನೀಡಿದ್ದಾರೆ.

‘ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಮತ್ತು ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಪ್ರಮಾಣ ವಚನ ಸಮಾರಂಭದಲ್ಲಿ ಉಪಸ್ಥಿತರಿರಲಿದ್ದಾರೆ. ಅವರಿಗೆ ಅನುಕೂಲಕರ ದಿನ‌ ನೋಡಿಕೊಂಡು ದಿನ ಅಂತಿಗೊಳಿಸುತ್ತೇನೆ’ ಎಂದು ಯಡಿಯೂರಪ್ಪ e ಸಮಯದಲ್ಲಿ ಹೇಳಿದ್ದು, ಕೊನೆಗೂ ಸಂಪುಟ ವಿಸ್ತರಣೆಗೆ ಗ್ರೀನ್ ಸಿಗ್ನಲ್ ಸಿಕ್ಕಂತಾಗಿದೆ.

ಆದರೆ ಸಂಪುಟ ವಿಸ್ತರಣೆ ಮಾಡ್ತಿರೋ ಅಥವಾ ಪುನರ್ ರಚನೆಯೇ ಎಂದು ಕೇಳಿದಾಗ ‘ಏಳು ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ನೋಡೋಣ ಎರಡೂ ಗೊತ್ತಾಗುತ್ತದೆ’ ಎಂದು ಅಡ್ದ ಗೋಡೆಯ ಮೇಲೆ ದೀಪ ಇಟ್ಟರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
204

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು