News Karnataka Kannada
Saturday, May 04 2024
ಬೆಂಗಳೂರು ನಗರ

ಸಂಚಾರ ನಿಯಮ‌ ಉಲ್ಲಂಘಿಸಿದ ಪ್ರಕರಣಗಳಲ್ಲಿ ₹660 ಕೋಟಿ ದಂಡ ಸಂಗ್ರಹ; ಆರಗ ಜ್ಞಾನೇಂದ್ರ

Traffic Rules
Photo Credit :

ಬೆಂಗಳೂರು : ‘ರಾಜ್ಯದಲ್ಲಿ ಕಳೆದ ಮೂರು ವರ್ಷಗಳಲ್ಲಿ ಸಂಚಾರ ನಿಯಮ‌ ಉಲ್ಲಂಘಿಸಿದ ಪ್ರಕರಣಗಳಲ್ಲಿ ₹ 660.97 ಕೋಟಿ ದಂಡ ಸಂಗ್ರಹಿಸಲಾಗಿದೆ’ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ವಿಧಾನಪರಿಷತ್‌ನಲ್ಲಿ ಕಾಂಗ್ರೆಸ್ಸಿನ ದಿನೇಶ್‌ ಗೂಳಿಗೌಡ ಅವರ ಪ್ರಶ್ನೆಗೆ ಉತ್ತರಿಸಿರುವ ಅವರು, ‘ವಸೂಲು ಮಾಡಿದ ದಂಡದ ಮೊತ್ತವನ್ನು ಸಂಚಾರ ಸುಧಾರಣೆಗಾಗಿ ಸುಧಾರಿತ ತಂತ್ರಜ್ಞಾನ ಅಳವಡಿಸಲು ಬಳಸಲಾಗುತ್ತದೆ.

ಮುಖ್ಯವಾಗಿ, ಸಂಚಾರ ಸೂಚನಾ ಫಲಕ, ಸಿ.ಸಿ ಟಿವಿ ಕ್ಯಾಮೆರಾ, ಹೆದ್ದಾರಿ ಗಸ್ತು ವಾಹನ, ಇಂಟರ್‌ಸೆಪ್ಟರ್‌ ವಾಹನ ಖರೀದಿ, ಸಂಚಾರ ನಿಯಮ ಉಲ್ಲಂಘಿಸುವವರ ವಿರುದ್ಧ ಪ್ರಕರಣ ದಾಖಲಿಸಲು ಬಳಸುವ ಪಿಡಿಎ ಸಾಧನ ಮುಂತಾದ ಪರಿಕರಗಳನ್ನು ಖರೀದಿಸಲು ಬಳಕೆ ಮಾಡಲಾಗುತ್ತದೆ’ ಎಂದಿದ್ದಾರೆ.

‘ಸಂಚಾರ ಸುಧಾರಣೆಗಾಗಿ 2018-19ರಿಂದ 2020-21ರವರೆಗಿನ ಮೂರು ವರ್ಷಗಳಲ್ಲಿ ₹ 67.75 ಕೋಟಿ ಬಿಡುಗಡೆ ಮಾಡಲಾಗಿದೆ. ಆ ಪೈಕಿ, ₹ 47.09 ಕೋಟಿ ವೆಚ್ಚ ಮಾಡಲಾಗಿದೆ. 2020-21ರ ಅನುದಾನದಲ್ಲಿ ಬಾಕಿ ಉಳಿದ ₹ 19.73 ಕೋಟಿಯನ್ನು ಬೆಂಗಳೂರು ನಗರ ಪೊಲೀಸ್ ಕಮಿಷನರ್‌, ಕೆಆರ್‌ಡಿಸಿಎಲ್‌ ಸಂಸ್ಥೆಯಲ್ಲಿ ಠೇವಣಿಯಾಗಿಟ್ಟು, ಟೆಂಡರ್ ಪ್ರಕ್ರಿಯೆ ಕೈಗೊಂಡಿದ್ದಾರೆ’ ಎಂದಿದ್ದಾರೆ.

ಔರಾದಕರ್‌ ವರದಿಗೆ ಕ್ರಮ: ‘ರಾಘವೇಂದ್ರ ಔರಾದಕರ್‌ ವರದಿಯ ಶಿಫಾರಸುಗಳನ್ನು ಸರ್ಕಾರ ಭಾಗಶಃ ಅಂಗೀಕರಿಸಿ, ಜಾರಿ ಮಾಡಿದೆ. ಇದರಿಂದ 84,773 ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಅನುಕೂಲವಾಗಿದೆ’ ಎಂದೂ ಜ್ಞಾನೇಂದ್ರ ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು