News Karnataka Kannada
Thursday, May 02 2024
ಬೆಂಗಳೂರು ನಗರ

ಸಂತೋಷ್ ಪಾಟೀಲ್ ಯಾರು ಎಂದು ನನಗೆ ಗೊತ್ತಿಲ್ಲ; ಸಚಿವ ಕೆ.ಎಸ್. ಈಶ್ವರಪ್ಪ

Photo Credit :

ಬೆಂಗಳೂರು : ಸಂತೋಷ್ ಪಾಟೀಲ್ ಯಾರು ಎಂದು ನನಗೆ ಗೊತ್ತಿಲ್ಲ,ಯಾವುದೋ ಒಂದು ಷಡ್ಯಂತ್ರ ನಡೆದಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಕೆ.ಎಸ್. ಈಶ್ವರಪ್ಪ ಮಂಗಳವಾರ ಹೇಳಿಕೆ ನೀಡಿದ್ದಾರೆ.

ಸಂತೋಷ್ ಪಾಟೀಲ್ ಎಂಬ ವ್ಯಕ್ತಿ ದೆಹಲಿಗೆ ಹೋಗಿ ನನ್ನ ವಿರುದ್ಧ ದೂರು ಕೊಟ್ಟಿದ್ದಾರೆ.ನಮ್ಮ ಕಡೆಯವರು ಯಾರೋ ಕಮಿಷನ್ ಕೇಳಿದ್ದಾರೆ ಎಂಬ ಆರೋಪ ಮಾಡಿದ್ದಾರೆ.

ಅದಕ್ಕೆ ಗಿರಿರಾಜ್ ಸಿಂಗ್ ಕಿಶೋರ್ ಅವರ ಕಚೇರಿಯಿಂದ ನಮ್ಮ ಇಲಾಖೆ ಎಸಿಎಸ್ ಅತೀಕ್ ಅವರಿಂದ ವಿವರ ಕೇಳಿದ್ದರು. ಅವರು ಪಂಚಾಯತ್ ರಾಜ್ ಇಲಾಖೆಯಿಂದ ಸಂತೋಷ್ ಅವರಿಗೆ ಯಾವುದೇ ವರ್ಕ್ ಆರ್ಡರ್ ಮಂಜೂರು ಮಾಡಿಲ್ಲ ಎಂದು ಕೇಂದ್ರ ಗ್ರಾಮೀಣಾಭಿವೃದ್ಧಿ ಇಲಾಖೆ ಕಾರ್ಯದರ್ಶಿಗೆ ಸ್ಪಷ್ಟೀಕರಣ ಕಳುಹಿಸಿದ್ದಾರೆ ಎಂದರು.

ಸಂತೋಷ್ ಪಾಟೀಲ್ ಯಾರು ಅಂತಾ ಬೆಳಗಾವಿ ಜಿಲ್ಲಾ ಬಿಜೆಪಿ ಅಧ್ಯಕ್ಷರಿಗೂ ಕೇಳಿದೆ, ಅವರಿಗೂ ಗೊತ್ತಿಲ್ಲ. ನಮ್ಮ ಪಕ್ಷದ ನಾಯಕರಿಗೆ, ಕೇಂದ್ರ ಸಚಿವರಿಗೆ ಪತ್ರ ಬರೆದಿದ್ದಾರೆ ಅಂತಾ ನಿನ್ನೆ ದೆಹಲಿಯಲ್ಲಿ ಕಾಂಗ್ರೆಸ್ ಸಂಸದರು ಸುದ್ದಿಗೋಷ್ಠಿ ಮಾಡಿ ಹೇಳಿದ್ದಾರೆ. ನಮ್ಮ ಇಲಾಖೆಯಿಂದ ಯಾವುದೇ ವರ್ಕ್ ಆರ್ಡರ್ ಅವರಿಗೆ ಕೊಟ್ಟಿಲ್ಲ. ಕೆಲಸವೇ ಮಾಡಿಸಿಲ್ಲ ಎಂದ ಮೇಲೆ ಹಣ ಕೊಡುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದರು.

ಷಡ್ಯಂತ್ರದ ಬಗ್ಗೆ ಈಗಾಗಲೇ ಮಾರ್ಚ್ 10 ರಂದು ಮಾನನಷ್ಟ ಮೊಕದ್ದಮೆ ಹೂಡಿದ್ದೇನೆ. ನಮ್ಮ ವಕೀಲರು ಈಗಾಗಲೇ ವಾದ ಮಾಡಿದ್ದಾರೆ, ನಾಳೆ ಅವರಿಗೆ ನೋಟೀಸ್ ಕೊಡುತ್ತಾರೆ. ಮಾರ್ಚ್ 9 ರಂದು ಈ ವಿಚಾರ ನನ್ನ ಗಮನಕ್ಕೆ ಬಂದಿತ್ತು. ಸಂತೋಷ್ ನಮ್ಮ ಪಕ್ಷದ ಕಾರ್ಯಕರ್ತ ಅಲ್ಲ ನಮ್ಮ ಬೆಳಗಾವಿ ಜಿಲ್ಲಾಧ್ಯಕ್ಷರು ಸ್ಪಷ್ಟಪಡಿಸಿದ್ದಾರೆ. ದೂರಿನಲ್ಲಿ ಸಂತೋಷ್ ಪಾಟೀಲ್ ಮಾಡಿರುವ ಆರೋಪಕ್ಕೂ ನಮ್ಮ ಇಲಾಖೆಗೂ ಸಂಬಂಧವಿಲ್ಲ ಎಂದರು.

ನಿನ್ನೆ ದೆಹಲಿಯಲ್ಲಿ ಕಾಂಗ್ರೆಸ್ ಮಾಡಿರುವ ಆರೋಪದಲ್ಲಿ ಹುರುಳಿಲ್ಲ. ಷಡ್ಯಂತ್ರದಲ್ಲಿ ಯಾರ್ಯಾರು ಇದ್ದಾರೆ ಅಂತಾ ಇನ್ನೂ ನನಗೆ ಗೊತ್ತಿಲ್ಲ ಎಂದರು.

ಟಿಪ್ಪು ಸುಲ್ತಾನ್ ವಿಚಾರವಾಗಿ ರಾಜ್ಯ ಸರ್ಕಾರಕ್ಕೆ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿ ವರದಿ ವಿಚಾರಕ್ಕೆ ಪ್ರತಿಕ್ರಿಯಿಸಿ, ಸಮಿತಿ ರಾಜ್ಯ ಸರ್ಕಾರಕ್ಕೆ ಏನೇನು ವರದಿ ಕೊಟ್ಟಿದ್ದಾರೆ ಅಂತಾ ನನಗೆ ಇನ್ನೂ ಗೊತ್ತಿಲ್ಲ. ಅದನ್ನು ತಿಳಿದುಕೊಂಡು ನಂತರ ಪ್ರತಿಕ್ರಿಯೆ ಕೊಡುತ್ತೇನೆ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು