ಬೆಂಗಳೂರು: ಹಿಜಾಬ್ ವಿಚಾರದಲ್ಲಿ ಮಕ್ಕಳಿಗೆ ಮನವರಿಕೆ ಮಾಡಬೇಕು. ತಂದೆ ತಾಯಿ, ಗುರುಗಳು ಮಕ್ಕಳ ಮನವೊಲಿಸಬೇಕು ಅಷ್ಟೇ. ಕೋರ್ಟ್ ತೀರ್ಪನ್ನು ಕೆಲವರು ಒಪ್ಪುತ್ತಾರೆ. ಕೆಲವರು ಒಪ್ಪಲ್ಲ. ನ್ಯಾಯಾಲಯದ ತೀರ್ಪು ಸರಿಯಿಲ್ಲ ಎಂದು ಹೇಳುವುದಿಲ್ಲ.
ಈ ಕೋರ್ಟ್ ತೀರ್ಪಿನ ಮೇಲೆ ಸುಪ್ರೀಂ ಕೋರ್ಟ್ಗೂ ಹೋಗಲು ಅವಕಾಶವಿದೆ. ಇನ್ನೂ ಸಂವಿಧಾನದಲ್ಲಿ ಇರುವ ವಿಚಾರಗಳೇ ಬೈಬಲ್, ಕುರಾನ್, ಭಗವದ್ಗೀತೆಯಲ್ಲಿ ಇದೆ. ಸಂವಿಧಾನದಲ್ಲಿನ ವಿಚಾರಗಳಿಗೆ ಕಾಂಗ್ರೆಸ್ ಬೆಲೆ ಕೊಡುತ್ತದೆ ಎಂದು ಬೆಂಗಳೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿಕೆ ನೀಡಿದ್ದಾರೆ.
ಸ್ವಾಮೀಜಿಗಳ ಬಗ್ಗೆ ಸಿದ್ದರಾಮಯ್ಯ ಹೇಳಿಕೆ ವಿಚಾರ: ಆ ವಿಷಯದ ಬಗ್ಗೆ ಅವರೇ ಉತ್ತರ ಕೊಡುತ್ತಾರೆ. ಈಗಾಗಲೇ ಅವರು ಟ್ವೀಟ್ ಮಾಡಿ ಸ್ಪಷ್ಟನೆ ನೀಡಿದ್ದಾರೆ. ಅವರಿಗೆ ಎಲ್ಲ ಧರ್ಮ, ಸ್ವಾಮೀಜಿಗಳ ಮೇಲೆ ಗೌರವ ಇದೆ. ಅವರು ಸಿಎಂ ಆಗಿದ್ದಾಗ ಎಲ್ಲ ಧರ್ಮಗಳಿಗೂ ಬೇಕಾದಷ್ಟು ಸಹಾಯ ಮಾಡಿದ್ದಾರೆ. ಅವರು ಏನು ಮಾತಾಡಿದ್ದಾರೋ ಅದಕ್ಕೆ ಅವರೇ ಉತ್ತರ ಕೊಡುತ್ತಾರೆ ಎಂದು ಹಿಜಾಬ್ ಬಗ್ಗೆ ಸಿದ್ದರಾಮಯ್ಯ ಮಾತಾಡಿದ ಹೇಳಿಕೆ ಬಗ್ಗೆ ಡಿಕೆಶಿ ಪ್ರತಿಕ್ರಿಯೆ ನೀಡಿದ್ದಾರೆ.