News Karnataka Kannada
Saturday, April 27 2024
ಬೆಂಗಳೂರು ನಗರ

ಸಮಾಜದಲ್ಲಿ ಹಿಂದು-ಮುಸ್ಲಿಮರು ಸಹೋದರರಂತೆ ಬದುಕಬೇಕು: ಬಿ.ಎಸ್.ಯಡಿಯೂರಪ್ಪ ಕಿವಿ ಮಾತು

Vijaya Sankalp Yatra cancelled in Mudigere
Photo Credit :

ಸಮಾಜದಲ್ಲಿ ಹಿಂದು-ಮುಸ್ಲಿಮರು ಸಹೋದರರಂತೆ ಬದುಕಬೇಕು.ಅಹಿತಕರ ಘಟನೆಗಳು ಸಲ್ಲದು. ಇಂತಹ ಘಟನೆಗಳನ್ನು ನಿಲ್ಲಿಸಿ ಎಲ್ಲರೂ ಅವರವರ ಕೆಲಸ ಮಾಡಿಕೊಂಡಿರಬೇಕು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕಿವಿ ಮಾತು ಹೇಳಿದರು.

ಬೆಂಗಳೂರುಅಧಿಕೃತ ನಿವಾಸ ಕಾವೇರಿ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದು-ಮುಸ್ಲಿಮರು ಒಂದೇ ತಾಯಿಯ ಮಕ್ಕಳ ರೀತಿ ಬದುಕಬೇಕು ಎನ್ನುವುದು ನಮ್ಮ ಅಪೇಕ್ಷೆ ಎಂದರು.

ಇನ್ನು ಮುಂದೆ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಬೇಕು. ನಾನು ಕೂಡ ಸಮುದಾಯದವರಿಗೆ ಕಿವಿಮಾತು ಹೇಳುತ್ತೇನೆ. ಇದನ್ನು ನಿಲ್ಲಿಸಿ, ನಿಮ್ಮ ನಿಮ್ಮ ಕೆಲಸ ಮಾಡಿಕೊಂಡಿರಿ. ಎಲ್ಲರೂ ಸಹ ಸಂಯಮದಿಂದ ಗೌರವದಿಂದ ಬದುಕಲು ಬಿಡಿ ಎಂದರು.

ರಾಜ್ಯ ಪ್ರವಾಸ :
ಮೂರು ತಂಡಗಳಲ್ಲಿ ರಾಜ್ಯ ಪ್ರವಾಸ ಮಾಡುತ್ತಿದ್ದೇವೆ. ಮೊದಲನೇ ತಂಡದಲ್ಲಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಎರಡನೇ ತಂಡದಲ್ಲಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಮತ್ತು ನಾನು ಜೊತೆಗಿರುತ್ತೇನೆ, ಮೂರನೇ ತಂಡದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇರಲಿದ್ದಾರೆ.

ಮುಂದೆ ನಿರಂತರವಾಗಿ ಪ್ರವಾಸ ನಡೆಯಲಿದೆ. ಈಗ ಮೊದಲ ಹಂತದಲ್ಲಿ ಮೂರು ತಂಡಗಳಲ್ಲಿ ಪ್ರವಾಸ ಮಾಡುತ್ತಿದ್ದೇವೆ ಎಂದು ಯಡಿಯೂರಪ್ಪ ವಿವರ ನೀಡಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು