ಬೆಂಗಳೂರು: ಸಮ್ಮಿಶ್ರ ಸರ್ಕಾರದ ಎಲ್ಲಾ ಸಚಿವರು ರಾಜೀನಾಮೆ ನೀಡುವ ಮೂಲಕ ರಾಜಕೀಯದಲ್ಲಿ ಕ್ಷಿಪ್ರ ಕ್ರಾಂತಿಯು ನಡೆದಿದೆ.
ಜೆಡಿಎಸ್ ಶಾಸಕರು ಹಾಗೂ ಸಚಿವರು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ನಿರ್ಧಾರಕ್ಕೆ ಬದ್ಧರಾಗಿದ್ದಾರೆ. ಈಗ ಜೆಡಿಎಸ್ ಶಾಸಕರು ಯಾವ ರೆಸಾರ್ಟ್ ಗೆ ತೆರಳಬೇಕು ಎಂದು ಇನ್ನಷ್ಟೇ ನಿರ್ಧಾರವಾಗಬೇಕಾಗಿದೆ.
ಶಾಸಕರ ಜತೆಗೆ ನಾವೆಲ್ಲರೂ ಮಾತುಕತೆ ನಡೆಸುತ್ತಿದ್ದೇವೆ. ರಾಜ್ಯಪಾಲರು ಕುದುರೆ ವ್ಯಾಪಾರಕ್ಕೆ ಅವಕಾಶ ಮಾಡಿಕೊಟ್ಟಿದ್ದಾರೆ. ರಾಜೀನಾಮೆ ನೀಡಿರುವ ಶಾಸಕರ ಜತೆಗೆ ಎರಡು ಗಂಟೆ ಕಾಲ ಚರ್ಚಿಸುವ ಅಗತ್ಯವೇನಿದೆ? ರಾಜ್ಯಪಾಲರು ಸರ್ಕಾರ ಅಸ್ಥಿರಗೊಳಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಉಪಮುಖ್ಯಮಂತ್ರಿ ಜಿ. ಪರಮೇಶ್ವರ್ ಆರೋಪಿಸಿದರು.