News Karnataka Kannada
Monday, April 29 2024
ಬೆಂಗಳೂರು ನಗರ

ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ : ಕಂಪ್ಯೂಟರ್ ಸಾಕ್ಷರತಾ ಪರೀಕ್ಷಾ ಕೇಂದ್ರ ಪ್ರಾರಂಭಿಸಲು ಗ್ರೀನ್ ಸಿಗ್ನಲ್ ನೀಡಿದ ರಾಜ್ಯ ಸರ್ಕಾರ

Vidhanaswada 15082021
Photo Credit :

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರು ಪರಿವೀಕ್ಷಣಾ ಅವಧಿ, ಮುಂಬಡ್ತಿ ಹಾಗೂ ವಾರ್ಷಿಕ ವೇತನ ಬಡ್ತಿ ಸೇರಿದಂತೆ ಇತರೆ ಸೌಲಭ್ಯ ಪಡೆಯೋದಕ್ಕೆ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ತೇರ್ಗಡೆಯಾಗೋದು ಕಡ್ಡಾಯವಾಗಿದೆ. ಈ ಪರೀಕ್ಷೆಯನ್ನು ಬೆಂಗಳೂರು ಕೇಂದ್ರದಲ್ಲಿ ಸೇರಿದಂತೆ ಕೆಲ ಆಯ್ದ ಜಿಲ್ಲೆಗಳಲ್ಲಿ ಮಾತ್ರ ಬರೆಯೋದಕ್ಕೆ ಅವಕಾಶ ನೀಡಲಾಗಿತ್ತು.

ಇದೀಗ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿಯೂ ಹೆಚ್ಚುವರಿಯಾಗಿ ಪರೀಕ್ಷಾ ಕೇಂದ್ರಗಳನ್ನು ಪ್ರಾರಂಭಿಸಲು ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಈ ಮೂಲಕ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ನೀಡಿದೆ.

ಈ ಕುರಿತಂತೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಮಾಹಿತಿ ಬಿಡುಗಡೆ ಮಾಡಲಾಗಿದ್ದು, ನೌಕರರು ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯನ್ನು ದಿನಾಂಕ 22-03-2022ರೊಳಗೆ ತೆಗೆದುಕೊಂಡು ಉತ್ತೀರ್ಣರಾಗಬೇಕಾಗಿರುತ್ತದೆ. ಸದರಿ ದಿನಾಂಕದ ನಂತ್ರ CLT ಪರೀಕ್ಷೆಯಲ್ಲಿ ಉತ್ತೀರ್ಣರಾಗದ ನೌಕರರು ಪರಿ ವೀಕ್ಷಣಾ ಅವಧಿ, ಮುಂಬಡ್ತಿ ಹಾಗೂ ವಾರ್ಷಿಕ ವೇತನ ಬಡ್ತಿ ಇತ್ಯಾದಿ ಸೌಲಭ್ಯವನ್ನು ಪಡೆಯಲು ಅನರ್ಹರಾಗಿರುತ್ತಾರೆ.

ಈ ಹಿನ್ನಲೆಯಲ್ಲಿ ಪ್ರಸ್ತುತ ಇರುವ ಪರೀಕ್ಷಾ ಕೇಂದ್ರಗಳ ಜೊತೆಗೆ ಬೆಂಗಳೂರು ಸೇರಿದಂತೆ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಹೆಚ್ಚುವರಿಯಾಗಿ ಪರೀಕ್ಷಾ ಕೇಂದ್ರಗಳನ್ನು ಪ್ರಾರಂಭಿಸುವಂತೆ ಸರ್ಕಾರಕ್ಕೆ ನೌಕರರ ಸಂಘವು ಮನವಿ ಮಾಡಿತ್ತು. ಈ ಮನವಿ ಪರಿಗಣಿಸಿರುವಂತ ಇ-ಆಡಳಿತ ಇಲಾಖೆಯು, ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿಯೂ ಹೆಚ್ಚುವರಿಯಾಗಿ ಕಂಪ್ಯೂಟರ್ ಸಾಕ್ಷರತಾ ಪರೀಕ್ಷಾ ಕೇಂದ್ರಗಳನ್ನು ಪ್ರಾರಂಭಿಸಲು ಅನುಮತಿ ನೀಡಿರೋದಾಗಿ ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು