ಬೆಂಗಳೂರು: ಕಾಲೇಜು ವಿದ್ಯಾರ್ಥಿಗಳಿಬ್ಬರ ಮಾರಾಮಾರಿಯು ಕೊಲೆಯಲ್ಲಿ ಪರ್ಯವಸಾನಗೊಂಡ ಘಟನೆಯು ನಗರದ ನಗಸಂದ್ರದಲ್ಲಿರುವ ಸೌಂದರ್ಯ ಪದವಿಪೂರ್ವ ಕಾಲೇಜಿನಲ್ಲಿ ಬುಧವಾರ ಬೆಳಗ್ಗೆ ನಡೆದಿದೆ.
ದಯಾಸಾಗರ್ ಕೊಲೆಗೀಡಾದ ವಿದ್ಯಾರ್ಥಿಯಾಗಿದ್ದಾನೆ. ಈತ ಈ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಯಾಗಿದ್ದಾನೆ. ಈತನ ಸಹಪಾಠಿ ರಕ್ಷಿತ್ ಹಾಗೂ ಮತ್ತಿಬ್ಬರು ಸೇರಿ ದಯಾಸಾಗರ್ ನನ್ನು ಹತ್ಯೆ ಮಾಡಿದ್ದಾರೆ.
ಕಾಲೇಜಿನ ನಾಲ್ಕನೇ ಅಂತಸ್ತಿನಲ್ಲಿರುವ ಶೌಚಾಲಯದಲ್ಲಿ ದಯಾಸಾಗರ್ ಗೆ ಇರಿದಿದ್ದು, ತೀವ್ರರಕ್ತಸ್ರಾವದಿಂದ ಕೊಲೆಯಾಗಿದ್ದಾನೆ ಎಂದು ಹೇಳಲಾಗಿದೆ.
ಆರೋಪಿಗಳನ್ನು ಶಿಕ್ಷಕರು ತಕ್ಷಣವೇ ಪೊಲೀಸರಿಗೆ ಒಪ್ಪಿಸಿದ್ದಾರೆ.