ಬೆಂಗಳೂರು: ಕೊರೋನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕ ಸಾರಿಗೆಯಲ್ಲಿ ದೂರದ ಊರುಗಳಿಗೆ ಪ್ರಯಾಣ ಮಾಡಬೇಡಿ ಎಂದು ಆರೋಗ್ಯ ಇಲಾಖೆಯು ಸೂಚನೆ ನೀಡಿದೆ.
ಸಾರ್ವಜನಿಕ ಸಾರಿಗೆಗಳಿಂದ ದೂರದ ಊರುಗಳಿಗೆ ಪ್ರಯಾಣಿಸಿದರೆ ಅದರಿಂದ ಕೋವಿಡ್-19 ಸೋಂಕು ಬರುವ ಸಾಧ್ಯತೆಯು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯು ಈ ಎಚ್ಚರಿಕೆ ಜಾರಿ ಮಾಡಿದೆ.
ಸಾರ್ವಜನಿಕ ಸಾರಿಗೆಯಲ್ಲಿ ಪ್ರಯಾಣಿಸುವ ವೇಳೆ ಪ್ರಯಾಣಿಕರು ಮಾಸ್ಕ್, ಸ್ಯಾನಿಟೈಸರ್ ಮತ್ತು ಕೈಗೆ ಕೂಡ ಗ್ಲೌಸ್ ಹಾಕಬೇಕು ಎಂದು ಆರೋಗ್ಯ ಹೇಳಿದೆ.
ಕಳೆದ 15 ದಿನಗಳಲ್ಲಿ ಸುಮಾರು 12 ಲಕ್ಷ ಪ್ರಯಾಣಿಕರು ಸಾರ್ವಜನಿಕ ಸಾರಿಗೆಯಲ್ಲಿ ಪ್ರಯಾಣ ಮಾಡಿರುವರು. ಕೆಎಸ್ ಆರ್ ಟಿಸಿ ಮತ್ತು ಬಿಎಂಟಿಸಿ ಬಸ್ ಸಂಚಾರವನ್ನು ಕೆಲವೊಂದು ಮಾರ್ಗಗಳಲ್ಲಿ ಆರಂಭಿಸಿದೆ.