News Karnataka Kannada
Monday, April 29 2024
ಬೆಂಗಳೂರು ನಗರ

ಸಿಂಧೂರ -ಹಿಜಾಬ್ ಎರಡು ನಮ್ಮ ಸಂಸ್ಕೃತಿ ಮತ್ತು ನಂಬಿಕೆ; ಸಿದ್ದರಾಮಯ್ಯ

ಶೂದ್ರರು ಮತ್ತು ದಲಿತರಿಗೆ ಆರ್.ಎಸ್.ಎಸ್ ಗರ್ಭಗುಡಿಗೆ ಪ್ರವೇಶ ಇಲ್ಲ, ಅವರೇನಿದ್ದರೂ ಹೊರಬಾಗಿಲಲ್ಲಿ ನಿಂತು 'ಜೀ..ಜೀ..ಹುಜೂರ್' ಎಂದಷ್ಟೇ ಹೇಳಬೇಕು. ಇದಕ್ಕೆ ಬಿಜೆಪಿಯ ಮಾಜಿ ಶಾಸಕ ಗೂಳಿಹಟ್ಟಿ ಶೇಖರ್ ಅವರು ಬಿ.ಎಲ್ ಸಂತೋಷ್‌ ಅವರಿಗೆ ಕಳುಹಿಸಿರುವ ವಾಟ್ಸಾಪ್ ವಾಯ್ಸ್ ರೆಕಾರ್ಡ್ ಸಾಕ್ಷಿ.
Photo Credit :

ಬೆಂಗಳೂರು : ಸಿಂಧೂರ ಆಗಲಿ-ಹಿಜಾಬ್ ಆಗಲಿ ಎರಡು ನಮ್ಮ ನಮ್ಮ ಸಂಸ್ಕೃತಿ ಮತ್ತು ನಂಬಿಕೆ. ಕುಂಕುಮ ಇಡುವುದರಿಂದ-ಹಿಜಾಬ್ ಹಾಕುವುದರಿಂದ ಯಾರಿಗೂ ತೊಂದರೆ ಇಲ್ಲ. ಯಾವುದೇ ಸಂಸ್ಕೃತಿಯನ್ನು ಬಲವಂತದಿಂದ ತಡೆಯುವುದು ತಪ್ಪು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಹೇಳಿದರು.

ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ಅವರು ಪ್ರತಿಕ್ರಿಯಿಸಿದರು ಅವರು, ಹಣೆಗೆ ಕುಂಕುಮ ಇಡುವ ಮಕ್ಕಳನ್ನು ಕಾಲೇಜುಗಳಿಗೆ ಪ್ರವೇಶ ನಿರಾಕರಿಸುತ್ತಿರುವ ಮತ್ತು ಸಿಂಧೂರ ವಿವಾದದ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿ, ಸಿಂಧೂರ ಇಡುವುದರಿಂದ ಯಾರಿಗೂ ತೊಂದರೆ ಇಲ್ಲ. ಹಾಗೆಯೇ ಹಿಜಾಬ್ ಧರಿಸುವುದರಿಂದಲೂ ಯಾರಿಗೂ ತೊಂದರೆ ಇಲ್ಲ. ಹಿಂದಿನಿಂದ ನಡೆದುಕೊಂಡು ಬಂದಿರುವ ನಂಬಿಕೆ, ಆಚರಣೆ, ಪರಂಪರೆಗೆ ತಕ್ಕಂತೆ ನಡೆದುಕೊಳ್ಳುವುದು ಯಾರಿಗೂ ತೊಂದರೆ ಇಲ್ಲ.

ಹಿಜಾಬನ್ನು ಹಿಂದಿನಿಂದಲೂ ಧರಿಸಿಕೊಂಡು ಬರುತ್ತಿದ್ದರು. ಕೇಸರಿ ಶಾಲು ಹಿಂದಿನಿಂದ ಯಾರೂ ಹಾಕುತ್ತಿರಲಿಲ್ಲ. ಹಿಜಾಬ್ ಅನ್ನು ವಿರೋಧಿಸುವುದಕ್ಕೋಸ್ಕರವೇ ಕೇಸರು ಶಾಲು ಹಾಕಿಸುವುದು ಅತ್ಯಂತ ಸಣ್ಣ ತನ. ಇದು ಕೇಸರಿ ಶಾಲಿಗೂ ಮಾಡುವ ಅವಮನ.ಕೇಸರಿ ಶಾಲನ್ನು ಅಮಾನವೀಯ, ಅನಾಗರಿಕ ಕಾರಣಗಳಿಗೆ ಬಳಸಬಾರದು.

ಬಿಜೆಪಿಯವರು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ್ದರೆ, ಅವರು ನಮ್ಮ ರಾಷ್ಟ್ರ ಧ್ವಜವನ್ನು ಹಿಡಿದು ಬ್ರಿಟಿಷರ ವಿರುದ್ಧ ಹೋರಾಡಿದ್ದರೆ ಅವರಿಗೆ ನಮ್ಮ ರಾಷ್ಟ್ರ ಧ್ವಜ ಮತ್ತು ರಾಷ್ಟ್ರೀಯ ಲಾಂಛನಗಳ ಬಗ್ಗೆ ನಿಜವಾದ ಗೌರವ-ಭಕ್ತಿ ಇರುತ್ತಿತ್ತು.

ಇವರು ಸ್ವಾತಂತ್ರ್ಯ ಹೋರಾಟದಲ್ಲೂ ಭಾಗವಹಿಸಲಿಲ್ಲ. ರಾಷ್ಟ್ರ ಧ್ವಜವನ್ನೂ ಬ್ರಿಟಿಷರ ವಿರುದ್ಧ ಹಿಡಿಯಲಿಲ್ಲ. ಹೀಗಾಗಿ ಇವರ ಮನಸ್ಥಿತಿಯೇ ರಾಷ್ಟ್ರ ಧ್ವಜದ ವಿರುದ್ಧ ಇದೆ. ರಾಷ್ಟ್ರಧ್ವಜ ಮತ್ತು ಈಶ್ವರಪ್ಪ ಅವರ ಸಚಿವ ಸ್ಥಾನ ಇವೆರಡರಲ್ಲಿ ನಿಮಗೆ ಯಾವುದು ಮುಖ್ಯ ಎನ್ನುವ ಪ್ರಶ್ನೆಯನ್ನು ನಾವು ಬಿಜೆಪಿ ಮುಂದಿಟ್ಟೆವು.

ಬಿಜೆಪಿ ರಾಷ್ಟ್ರ ಧ್ವಜಕ್ಕಿಂತ ಸಚಿವ ಸ್ಥಾನವೇ ಮುಖ್ಯ ಎಂದು ಹಠ ಹಿಡಿದು ಕುಳಿದಿದೆ. ರಾಷ್ಟ್ರೀಯ ಲಾಂಛನಗಳಿಗೆ ಅವಮಾನ ಮಾಡುವುದು ರಾಷ್ಟ್ರದ್ರೋಹ ಮತ್ತು ಸ್ಪಷ್ಟ ಕಾನೂನಿನ ಉಲ್ಲಂಘನೆ. “ನಾವು ರಾಷ್ಟ್ರ ಧ್ವಜಕ್ಕಾದರೂ ಅವಮಾನ ಮಡುತ್ತೀವಿ, ಕಾನೂನನ್ನೂ ಉಲ್ಲಂಘಿಸುತ್ತೀವಿ. ಯಾರೂ ಪ್ರಶ್ನಿಸಬಾರದು’ ಎನ್ನುವ ಬಿಜೆಪಿ ಧೋರಣೆಯನ್ನು ನಾವು ಪ್ರತಿಭಟಿಸುತ್ತಿದ್ದೀವಿ.

ರಾಷ್ಟ್ರ ಧ್ವಜಕ್ಕೆ ಅವಮಾನ ಮಾಡುವುದು ಬಿಜೆಪಿಯವರಿಗೆ ಸಣ್ಣ ವಿಷಯ ಇರಬಹುದು. ಆದರೆ ನಮಗೆ ಇದು ಬಹಳ ಗಂಭೀರವಾದ ಸಂಗತಿ. ರಾಷ್ಟ್ರಧ್ವಜ ಹಿಡಿದು ಲಕ್ಷಾಂತರ ಮಂದಿ ಪ್ರಾಣ ತ್ಯಾಗ ಮಾಡಿದ್ದಾರೆ. ಸ್ವಾತಂತ್ರ್ಯ ಹೋರಾಟದ ಮೌಲ್ಯ ಬಿಜೆಪಿಯವರಿಗೆ ಗೊತ್ತಿಲ್ಲವಾದ್ದರಿಂದ ಅವರಿಗೆ ಹುತಾತ್ಮರ ಬೆಲೆ ಕೂಡ ಗೊತ್ತಿಲ್ಲ.

ಹುತಾತ್ಮರು ಹಿಡಿದ ರಾಷ್ಟ್ರ ಧ್ವಜದ ಬೆಲೆಯೂ ಗೊತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ವಿರೋಧ ಪಕ್ಷಕ್ಕೆ ನೈತಿಕತೆ ಇಲ್ಲ ಎನ್ನುವ ಮುಖ್ಯಮಂತ್ರಿ ಬೊಮ್ಮಾಯಿ ಅವರ ಮಾತಿಗೆ ಪ್ರತಿಕ್ರಿಯಿಸಿ, ನಮಗೆ ಬೊಮ್ಮಾಯಿ ಅವರಿಗಿಂತ ಹೆಚ್ಚು ಹೋರಾಟದ ಅನುಭವವಿದೆ. ಸ್ವಾತಂತ್ರ್ಯ ಹೋರಾಟದ ತ್ಯಾಗ ಬಲಿದಾನ ನಮಗೆ ಗೊತ್ತಿದೆ. ಅವರಿಗೇನು ಗೊತ್ತಿದೆ‌ ಇದೆಲ್ಲಾ.

ಹೀಗಾಗಿ ರಾಷ್ಟ್ರ ಧ್ವಜಕ್ಕೆ ಮಾಡಿದ ಅವಮಾನವನ್ನು ಸಹಿಸಿಕೊಳ್ಳಿ ಎಂದು ಅವರು ಹೇಳಿದರೆ ನಾವು ಸಹಿಸಿಕೊಳ್ಳಲು ಸಿದ್ದರಿಲ್ಲ. ಸದನದ ಒಳಗೆ ಮತ್ತು ಹೊರಗೆ ಹೋರಾಟ ಮಾಡುತ್ತೇವೆ.

ಮುಂದೆಬರಲಿರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಚರ್ಚಿಸುವ ಉದ್ದೇಶದಿಂದ ಮುಂಬರುವ 25 ಕ್ಕೆ ಹೈಕಮಾಂಡ್ ನನ್ನನ್ನು ಕರೆದಿದೆ. ಅದಕ್ಕೆ ದೆಹಲಿಗೆ ಹೋಗುತ್ತಿದ್ದೇನೆ. ಎಐಸಿಸಿ ವರಿಷ್ಠರಾದ ರಾಹುಲ್ ಗಾಂಧಿಯವರ ಸಾರಥ್ಯದಲ್ಲಿ ಸಭೆ ನಡೆಯಲಿದೆ ಎಂದು ಸಿದ್ದರಾಮಯ್ಯ ಅವರು ತಿಳಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು