ಹಾಸನ : ಅನೇಕ ವಿವಾದಗಳ ನಂತರ ರಾಜ್ಯರಾಜಕಾರಣದಲ್ಲಿ ಮತ್ತೆ ಇದೀಗ ಸ್ಥಿರತೆ ಉಂಟಾಗಿದ್ದು, ಸಿಎಂ ಬದಲಾವಣೆ ಕುರಿತು ಯಡಿಯೂರಪ್ಪ ಸ್ಪಷ್ಟ ನಿಲುವನ್ನು ತಿಳಿಸಿದ್ದಾರೆ.
ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಮಾತಿಲ್ಲ . ಬಿಜೆಪಿ ವರಿಷ್ಟ ಮಂಡಳಿ ಇದನ್ನು ಸ್ಪಷ್ಟಪಡಿಸಿದೆ . ನಾನು ಜನರಿಗೆ ಭರವಸೆ ನೀಡುತ್ತಿದ್ದೇನೆ . ಮುಂದಿನ ಎರಡು ವರ್ಷ ಮುಖ್ಯಮಂತ್ರಿಯಾಗಿ ನಾನು ಮುಂದುವರಿಯಲಿದ್ದೇನೆ . ಇದರಲ್ಲಿ ಯಾವುದೇ ಸಂಶಯ ಬೇಡ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ .
ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರು ಮುಖ್ಯಮಂತ್ರಿ ಬದಲಾವಣೆ ಇಲ್ಲ ಎಂಬ ಹೇಳಿಕೆ ನೀಡಿದ ಬಳಿಕ ಸಿಎಂ ಬಹಿರಂಗವಾಗಿ ತಮ್ಮ ಅನಿಸಿಕೆ ವ್ಯಕ್ತಪಡಿಸಿದ್ದಾರೆ .