ಬೆಂಗಳೂರು,ಮೇ.13: ಮುಖ್ಯಮಂತ್ರಿಗಳ ಬಹುನಿರೀಕ್ಷಿತ ಲಂಡನ್ ಪ್ರವಾಸ ಕೊನೆ ಕ್ಷಣದಲ್ಲಿ ರದ್ದುಗೊಂಡಿದೆ. ಇದೇ 19ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಲಂಡನ್ಗೆ ತೆರಳಬೇಕಾಗಿತ್ತು.
ಇದಕ್ಕಾಗಿ ಸಿದ್ದತೆಯನ್ನು ಸಹ ಕೈಗೊಳ್ಳಲಾಗಿತ್ತು. ಆದರೆ ಕೊನೆಕ್ಷಣದಲ್ಲಿ ಅವರ ಲಂಡನ್ ಪ್ರವಾಸ ರದ್ದುಗೊಂಡಿದೆ. ಇದೀಗ ಪೂರ್ವ ನಿಗಯಂತೆ ಇದೇ 21ರಂದ ದಾವೋಸ್ನಲ್ಲಿ ನಡೆಯಲಿರುವ ವಿಶ್ವ ಆರ್ಥಿಕ ಸಮ್ಮೇಳನಕ್ಕೆ ತೆರಳಲಿದ್ದಾರೆ. ಮುಖ್ಯಮಂತ್ರಿಯವರೊಂದಿಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ, ಸರ್ಕಾರದ ಮುಖ್ಯಕಾರ್ಯದರ್ಶಿ ಪಿ.ರವಿಕುಮಾರ್ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ದಾವೋಸ್ಗೆ ತೆರಳಲಿದ್ದಾರೆ.
ದಾವೋಸ್ನಲ್ಲಿ ವಿಶ್ವ ಆರ್ಥಿಕ ಸಮ್ಮೇಳನ ನಡೆಯಲಿದ್ದು, ಮುಖ್ಯಮಂತ್ರಿಯವರು ವಿಶ್ವದ ಪ್ರಮುಖ ಉದ್ಯಮಿಗಳನ್ನು ಭೇಟಿಯಾಗಿ ರಾಜ್ಯದಲ್ಲಿ ಬಂಡವಾಳ ಹೂಡಿಕೆಗೆ ಆಹ್ವಾನ ನೀಡಲಿದ್ದಾರೆ.
ಪ್ರತಿ ವರ್ಷ ದಾವೋಸ್ನಲ್ಲಿ ವಿಶ್ವ ಆರ್ಥಿಕ ಸಮ್ಮೇಳನ ನಡೆಯಲಿದೆ. ವಿಶ್ವದ ಅತ್ಯಂತ ಮುಂಚೂಣಿಯಲ್ಲಿರುವ ಉದ್ಯಮಿಗಳು ಇಲ್ಲಿ ಭಾಗವಹಿಸುತ್ತಾರೆ. ಆಯಾ ರಾಜ್ಯಗಳ ಮುಖ್ಯಮಂತ್ರಿಗಳ ಈ ಉದ್ಯಮಿಗಳನ್ನು ಭೇಟಿಯಾಗಿ ಬಂಡವಾಳ ಹೂಡಿಕೆಗೆ ಆಹ್ವಾನ ನೀಡುವುದು ವಾಡಿಕೆಯಾಗಿದೆ.
ಅಮೇರಿಕಾದಲ್ಲಿ ಎಂಡಿಎಚ್ ಸಾಂಬಾರ್ ಮಸಾಲ ಪದಾರ್ಥಗಳು ತಿರಸ್ಕೃತಗೊಂಡಿವೆ. ಈ ಮಸಾಲಗಳಲ್ಲಿ ಸಾಲ್ಮೋನೆಲ್ಲಾ ಬ್ಯಾಕ್ಟೀರಿಯಾ ಕಂಡುಬಂದಿದ್ದರಿಂದ ಅಮೆರಿಕದ ಆಹಾರ ಹಾಗೂ ಔಷಧ…
ಜೈಪುರದ ಪೊಲೀಸರು ಸೋಮವಾರ ಕನಿಷ್ಠ ನಾಲ್ಕು ಶಾಲೆಗಳಿಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಿದ್ದಾರೆ ಎಂದು ವರದಿ ಮಾಡಿದ್ದಾರೆ. ಸಂತ್ರಸ್ತ…
ಪ್ರಧಾನ ಮಂತ್ರಿ ನರೇಂದ್ರ ಮೋದಿ ನಾಳೆ ಬೆಳಿಗ್ಗೆ ವಾರಾಣಸಿಯಲ್ಲಿ ಲೋಕಸಭೆ ಚುನಾವಣೆ ಬಿಜೆಪಿ ಸ್ಪರ್ಧಿಯಾಗಿ ನಾಮಪತ್ರ ಸಲ್ಲಿಸಲಿದ್ದಾರೆ. ಇದಕ್ಕೆ ಒಂದು…
ಕಿಡ್ನಾಪ್ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲುಪಾಲಾಗಿರುವ ಮಾಜಿ ಸಚಿವ ಎಚ್.ಡಿ ರೇವಣ್ಣ ಅವರು ಇಂದು ಮತ್ತೆ ಜಾಮೀನು ಅರ್ಜಿ ವಿಚಾರಣೆ…
ಚುನಾವಣೆಗೂ ಮುನ್ನ ದಿನವೇ ಜಾರ್ಖಂಡ್ನ ಪಲಮುವಿನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೂವರು ಅಪ್ರಾಪ್ತರು ಸೇರಿದಂತೆ ಕನಿಷ್ಠ ನಾಲ್ವರು ಸಾವಿಗೀಡಾಗಿದ್ದಾರೆ ಎಂದು ಪೊಲೀಸರು…
ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ಎಲ್ಒಸಿ ಬಳಿ ಶನಿವಾರ ತಡರಾತ್ರಿ ಶಂಕಿತ ಪಾಕಿಸ್ತಾನಿ ಡ್ರೋನ್ ಮೇಲೆ ಭಾರತೀಯ ಸೇನಾ…