News Karnataka Kannada
Tuesday, May 07 2024
ಬೆಂಗಳೂರು ನಗರ

ಸಿಎಸ್ಆರ್ ನಿಧಿ ಪರಿಸರ ಸಂರಕ್ಷಣೆಗೆ ಬಳಕೆಯಾಗಲಿ: ಯದುವೀರ್

Yaduveer
Photo Credit :

ಬೆಂಗಳೂರು:ಕಂಪೆನಿಗಳು ಸಿ.ಎಸ್.ಆರ್. ನಿಧಿಯನ್ನು ಅತ್ಯಂತ ರಚನಾತ್ಮಕವಾಗಿ ಅಭಿವೃದ್ಧಿ ಉದ್ದೇಶಗಳಿಗೆ ಬಳಸಿದರೆ ಮಾತ್ರ ಅದು ಸಾರ್ಥಕತೆ ಪಡೆಯುತ್ತದೆ ಎಂದು ಮೈಸೂರಿನ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದ್ದಾರೆ.

ಬೆಂಗಳೂರಿನ ಅರಮನೆಯಲ್ಲಿ ನಡೆಯುತ್ತಿರುವ 49 ನೇ ಕಂಪೆನಿ ಸಕ್ರೆಟರಿಗಳ ರಾಷ್ಟ್ರೀಯ ಸಮಾವೇಶದಲ್ಲಿ ಕಂಪೆನಿಗಳ ಸಾಮಾಜಿಕ ಜವಾಬ್ದಾರಿ ಮತ್ತು ಸೇವಾ ಆಡಳಿತ ಕುರಿತು ಮಾತನಾಡಿದ ಅವರು, ಸರ್ಕಾರದ ನಿಧಿಗಳಿಗೆ ಸಿಎಸ್ಆರ್ ನಿಧಿಯನ್ನು ಸಮರ್ಪಿಸಿದರೆ ತನ್ನ ಸಾಮಾಜಿಕ ಜವಾಬ್ದಾರಿ ಕುರಿತ ತನ್ನ ಖರ್ಚು ವೆಚ್ಚಗಳಿಗೆ ವಿನಾಯಿತಿ ದೊರೆಯುತ್ತದೆ. ಪಿಎಂ ಕೇರ್ಸ್ ನಿಂದಲೂ ಸಹ ಅತ್ಯುತ್ತಮ ಕೆಲಸಗಳಾಗುತ್ತಿವೆ. ಆದರೆ ಕಂಪೆನಿಗಳು ಗಳಿಸುವ ತನ್ನ ಆದಾಯವನ್ನು ತಾವಿರುವ ಪರಿಸದರಲ್ಲಿ ಸದ್ಬಳಕೆ ಮಾಡಿಕೊಳ್ಳುವುದು ಸೂಕ್ತ ವಿಧಾನವಾಗುತ್ತದೆ ಎಂದು ಹೇಳಿದರು.

ಕಂಪೆನಿಗಳು ಸಿಎಸ್ಆರ್ ನಿಧಿಯನ್ನು ಪರಿಸರ ಸಂರಕ್ಷಣೆಗಾಗಿ ಹೆಚ್ಚಿನ ರೀತಿಯಲ್ಲಿ ಬಳಸಿಕೊಳ್ಳಬೇಕು.  ಪರಿಸರ ಸಮತೋಲನ ಕಾಪಾಡುವುದು ನಮ್ಮೆಲ್ಲರ ಜವಬ್ದಾರಿಯಾಗಿದೆ. ಮೈಸೂರು ಮಹಾರಾಜರ ಕಾಲದಲ್ಲಿ ಕಟ್ಟಿದ ಅಣೆಕಟ್ಟುಗಳು ಮತ್ತಿತರ ನಿರ್ಮಾಣ ಕಾಮಗಾರಿಗಳಿಂದ ಅಗಾಧವಾಗಿ ಅನುಕೂಲವಾಗುತ್ತಿದ್ದು, ಆಣೆಕಟ್ಟೆ ವ್ಯಾಪ್ತಿಯಲ್ಲಿ ನಾನಾ ವಿದಧ ಕಾರ್ಖಾನೆಗಳು ತಲೆ ಎತ್ತಿವೆ. ಆದರೆ ಇದೇ ಕಾಲಕ್ಕೆ ಪರಿಸರದ ಮೇಲೂ ಪ್ರತಿಕೂಲ ಪರಿಣಾಮಗಳಾಗುತ್ತಿವೆ ಎಂಬ ಆಕ್ಷೇಪವೂ ಇದೆ. ಪ್ರತಿಯೊಂದು ಕಂಪೆನಿ ತನ್ನ ಆದಾಯ ಹೆಚ್ಚಿಸಿಕೊಳ್ಳಲು, ತನ್ನ ವ್ಯಾಪ್ತಿಯನ್ನು ವಿಸ್ತರಿಸಲು ಮುಂದಾಗುತ್ತವೆ. ಇದೇ ರೀತಿ ತನ್ನ ಜವಾಬ್ದಾರಿಯನ್ನು ಅತ್ಯಂತ ಪರಿಣಾಮಕಾರಿಯಾಗಿ ನಿರ್ವಹಿಸುವುದುನ್ನು ಮರೆಯಬಾರದು ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು