ಬೆಂಗಳೂರು: ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿ ಅವರು ಅನಾರೋಗ್ಯಕ್ಕೆ ಒಳಗಾಗಿದ್ದು, ಅವರನ್ನು ನಗರದ ಬಿಜಿಎಸ್ ಆಸ್ಪತ್ರೆಗೆ ಶನಿವಾರ ಮಧ್ಯಾಹ್ನ ದಾಖಲಿಸಲಾಗಿದೆ.
ಸ್ವಾಮೀಜಿ ಅವರ ಆರೋಗ್ಯದಲ್ಲಿ ಏರುಪೇರಾಗಿದೆ. ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಮಠದ ಮೂಲಗಳು ಹೇಳಿವೆ.
ಶಿವಕುಮಾರ ಸ್ವಾಮೀಜಿ ಅವರು ಜ್ವರದಿಂದ ಬಳಲುತ್ತಿದ್ದಾರೆ. ಆರೋಗ್ಯ ತಪಾಸಣೆ ಬಳಿಕ ಅನಾರೋಗ್ಯದ ಬಗ್ಗೆ ಹೆಚ್ಚಿನ ಮಾಹಿತಿ ಸಿಗಲಿದೆ ಎನ್ನಲಾಗುತ್ತಿದೆ.