ಬೆಂಗಳೂರು: ವಿಧಾನಸಭಾ ಚುನಾವಣಾ ಬಹಿರಂಗ ಪ್ರಚಾರಕ್ಕೆ ತೆರೆ ಬೀಳುತ್ತಿದ್ದಂತೆ ಗುರುವಾರ ರಾತ್ರಿ ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಹಲವೆಡೆ ಭಾರೀ ಮಳೆಯಾಗಿದೆ. ಇನ್ನೂ ಮಳೆಗೆ ಜನಜೀವನ ಅಸ್ಥವ್ಯಸ್ತವಾಗಿದ್ದು ಹುಬ್ಬಳ್ಳಿಯಲ್ಲಿ ಕುಂದಗೋಳದಲ್ಲಿ ಕಾಂಗ್ರೆಸ್ ಪರ ಪ್ರಚಾರಕ್ಕೆ ತೆರಳಿದ್ದ ಓರ್ವ ಸಿಡಿಲಿಗೆ ಬಲಿತಾಗಿದ್ದಾನೆ. ಮೂವರು ಗಂಭೀರವಾಗಿ ಗಾಯಗೊಂಡಿದ್ದಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಎಲ್ಲೆಲ್ಲಿ ಮಳೆ: ಬೆಂಗಳೂರಿನಲ್ಲಿ ಯಶವಂತಪುರ, ಮಲ್ಲೇಶ್ವರಂ, ರಾಜಾಜಿನಗರ, ಗೋರಗುಂಟೆಪಾಳ್ಯ, ಶೇಷಾದ್ರಿಪುರಂ, ಮೆಜೆಸ್ಟಿಕ್ ಸೇರಿದಂತೆ ನಗರದ ಸುತ್ತಮುತ್ತಲ ಪ್ರದೇಶದಲ್ಲಿ ವರುಣನ ದರ್ಶನವಾಗಿದೆ. ಇನ್ನೂ ಗಾಳಿ ಸಮೇತ ಮಳೆ ಸುರಿದಿದ್ದು ಮಳೆಗೆ ಬೃಹತ್ ಮರಗಳು, ಕರೆಂಟ್ ಕಂಬಗಳು ಧರೆಗುರುಳಿವೆ. ಇದರಿಂದ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ.