ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಯಲಹಂಕ ಸಮೀಪದ ಜಿವಿಕೆಯಲ್ಲಿ ಐದು ದಿನಗಳ 107ನೇ ಇಂಡಿಯನ್ ಸೈನ್ಸ್ ಕಾಂಗ್ರೆಸ್ ಸಮ್ಮೇಳನವನ್ನು ಉದ್ಘಾಟಿಸಿದರು.
ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಆವಿಷ್ಕಾರ ಸ್ವಾಮ್ಯತೆ, ಉತ್ಪಾದನೆ ಮತ್ತು ಅಭಿವೃದ್ಧಿ ಎಂಬ ಮಂತ್ರ ನಮ್ಮ ದೇಶವನ್ನು ವೇಗವಾಗಿ ಅಭಿವೃದ್ಧಿಯತ್ತ ಸಾಗಿಸುತ್ತದೆ. ಯುವ ವಿಜ್ಞಾನಿ, ಉದ್ಯಮಿಗಳು ವೈಯ್ಯಕ್ತಿಕ ಪ್ರಗತಿಗಾಗಿ ಶ್ರಮಿಸುವುದರ ಜತೆಗೆ ದೇಶದ ಅಭಿವೃದ್ಧಿಗೂ ಶ್ರಮಿಸಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಮೋದಿ ಆಗಮನದ ಹಿನ್ನೆಲೆ ಬಿಗಿ ಬಂದೋಬಸ್ತ್ ನ್ನು ಆಯೋಜನೆ ಮಾಡಲಾಗಿತ್ತು. ಕಾರ್ಯಕ್ರಮದ ಬಳಿಕ ಮೋದಿ ನವದೆಹಲಿಗೆ ತೆರಳಲಿದ್ದಾರೆ.