ಬೆಂಗಳೂರು: ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಒಂದೆಡೆ ಜನ ಜೀವನ ಅಸ್ತವ್ಯಸ್ಥಗೊಂಡಿದ್ದರೇ, ಮತ್ತೊಂದೆಡೆ ರೈತರು ಬೆಳೆದಂತ ಬಳೆ ನೀರು ಪಾಲಾಗಿದೆ. ಸಮಯಕ್ಕೆ ಸರಿಯಾಗಿ ಕೊಯ್ಲಿಗೆ ಬಂದ ಬೆಳೆ ನೀರಲ್ಲಿ ಮುಳುಗಿ ಹೋಗಿದೆ.ಇದೇ ಸಂದರ್ಭದಲ್ಲಿ ಸೊಪ್ಪು, ತರಕಾರಿ ಸಮಯಕ್ಕೆ ಸರಿಯಾಗಿ ಪೂರೈಕೆಯಾಗದೇ, ಬೆಲೆಗಳ ದರದಲ್ಲಿ ಹೆಚ್ಚಳ ಕಂಡಿದೆ. ಈ ಮೂಲಕ ಜನಸಾಮಾನ್ಯರ ಜೇಬಿಗೆ ಬೆಲೆ ಏರಿಕೆಯ ಬರೆ ಬಿದ್ದಿದೆ.
ಇದೇ ಕಾರಣದಿಂದಾಗಿ ಬೆಂಗಳೂರಿನಲ್ಲಿ ಬೀನ್ಸ್, ಈರುಳ್ಳಿ, ಟೊಮ್ಮಾಯೋ, ಹೀರೇಕಾಯಿ, ತೊಗರಿ ಕಾಯಿ, ಬೆಂಡೆಕಾಯಿ, ಬದನೆಕಾಯಿ ಸೇರಿದಂತೆ ಕೆಲ ತರಕಾರಿಗಳ ಬೆಲೆ 100 ರೂ ಗಡಿ ದಾಟಿದೆ. ಕ್ಯಾಪ್ಸಿಕಾಂ, ತೊಂಡೆಕಾಯಿ, ಕ್ಯಾರೇಟ್, ನುಗ್ಗೇಕಾಯಿ ಬೆಲೆ, ಸೊಪ್ಪಿನ ದರಗಳಲ್ಲಿಯೂ ಏರಿಕೆ ಕಂಡಿವೆ.
ಕಾರ್ತೀಕ ಮಾಸದ ಹಿನ್ನಲೆಯಲ್ಲಿ ಎಲ್ಲೆಡೆ ಮದುವೆ, ಗೃಹಪ್ರವೇಶ, ನಾಮಕರಣದಂತ ಕಾರ್ಯಮಗಳು ನಡೆಯುತ್ತಿವೆ. ಬೇಡಿಕೆಯಷ್ಟು ಸೊಪ್ಪು, ತರಕಾರಿ ಮಳೆಯಿಂದಾಗಿ ಬೇಡಿಕೆಗೆ ಅನುಗುಣವಾಗಿ ಪೂರೈಕೆ ಆಗದೇ ಇರೋದೆ ಬೆಲೆ ಹೆಚ್ಚಳಕ್ಕೆ ಕಾರಣವಾಗಿದೆ.