News Karnataka Kannada
Friday, May 10 2024
ಬೆಂಗಳೂರು ನಗರ

ಸ್ಟಾರ್ಟ್ ಅಪ್ ಆವಿಷ್ಕಾರದಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ: ಸಿಎಂ ಬೊಮ್ಮಾಯಿ

Cm Bommai
Photo Credit :

ಬೆಂಗಳೂರು: ಸ್ಟಾರ್ಟ್ ಅಪ್ ಆವಿಷ್ಕಾರದಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ. ಫಾರ್ಚೂನ್ 500 ಕಂಪನಿಗಳ ಪೈಕಿ 400 ಕಂಪನಿಗಳಿಗೆ ಬೆಂಗಳೂರು ನೆಲೆಯಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಗುರುವಾರ ಹೇಳಿದ್ದಾರೆ.

ಸ್ವಿಡ್ಜರ್ಲೆಂಡ್ ಮೂಲದ ಪ್ರಮುಖ ಸಲಹಾ ಸಂಸ್ಥೆಯಾದ ಸ್ಮಡ್ಜಾ & ಸ್ಮಡ್ಜಾ ಆಯೋಜಿಸಿದ ಭಾರತದ ಮೊಟ್ಟಮೊದಲ ಜಾಗತಿಕ ಸ್ಟಾರ್ಟ್ ಅಪ್ ಸಮ್ಮೇಳನವಾದ “ಇಂಡಿಯಾ ಗ್ಲೋಬಲ್ ಇನ್ನೊವೇಶನ್ ಕನೆಕ್ಟ್” ಅನ್ನು ಮುಖ್ಯಮಂತ್ರಿ ಬೊಮ್ಮಾಯಿಯವರು ಉದ್ಘಾಟಿಸಿದರು.

ಈ ವೇಳೆ ಮಾತನಾಡಿದ ಅವರು, ಸ್ಟಾರ್ಟ್ ಅಪ್ ಆವಿಷ್ಕಾರದಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ. ಫಾರ್ಚೂನ್ 500 ಕಂಪನಿಗಳ ಪೈಕಿ 400 ಕಂಪನಿಗಳಿಗೆ ಬೆಂಗಳೂರು ನೆಲೆಯಾಗಿದೆ ಮತ್ತು ವಿಶ್ವದ ಯಾವುದೇ ದೇಶವು ಅಂತಹ ಕಂಪನಿಗಳನ್ನು ಹೊಂದಿಲ್ಲ. “ಸ್ಟಾರ್ಟಪ್ ಕರ್ನಾಟಕಕ್ಕೆ ಹೊಸದಲ್ಲ ಮತ್ತು ಕರ್ನಾಟಕವು ಅಗ್ರ ರಾಜ್ಯಗಳಲ್ಲಿ ಒಂದು ಮಾತ್ರವಾಗಿರದೇ ಸ್ಟಾರ್ಟಪ್‌ಗಳಿಗೆ ಅಗ್ರ ತಾಣವಾಗಿದೆ ಎಂದು ಹೇಳಿದರು.

ಸ್ಟಾರ್ಟ್‌ಅಪ್‌ಗಳನ್ನು ಬೆಂಬಲಿಸುವಲ್ಲಿ ಕರ್ನಾಟಕ ಸರ್ಕಾರವು ಎಷ್ಟು ದೂರ ಬೇಕಾದರು ಹೋಗಲು ಸಿದ್ಧವಿದೆ. ನಾವು ಸ್ಪರ್ಧೆಯ ಬಗ್ಗೆ ಚಿಂತಿಸುವುದಿಲ್ಲ. ಇದು ನಮ್ಮನ್ನು ಮುಂದುವರಿಸುತ್ತದೆ ಮತ್ತು ಬೆಳೆಸುತ್ತದೆ. ನಾವು ಸ್ಪರ್ಧೆಯನ್ನು ವೇಗವರ್ಧಕವಾಗಿ ಪರಿವರ್ತಿಸುತ್ತೇವೆ ಎಂದು ತಿಳಿಸಿದರು.

ದೇಶದಲ್ಲೇ ಸ್ಟಾರ್ಟ್ ಅಪ್ ನೀತಿಯನ್ನು ಪರಿಚಯಿಸಿದ ಮೊದಲ ರಾಜ್ಯ ಕರ್ನಾಟಕ, ದೇಶಕ್ಕೆ ಸ್ವಾತಂತ್ರ‍್ಯ ಸಿಗುವ ಮೊದಲೇ ಕೈಗಾರಿಕೀಕರಣ, ಬ್ಯಾಂಕಿಂಗ್ ಮತ್ತು ಅನುಶೋಧನೆಯನ್ನು ಬೆಂಬಲಿಸಿದ ಮೈಸೂರು ಮಹಾರಾಜರು ಸ್ಟಾರ್ಟ್ ಅಪ್ ಕ್ರಾಂತಿಯ ಬೀಜಗಳನ್ನು ಬಿತ್ತಿದರು ಎಂದು ಬಣ್ಣಿಸಿದರು.

ಸ್ಮಡ್ಜಾ & ಸ್ಮಡ್ಜಾ ಅಧ್ಯಕ್ಷ ಕ್ಲೌಡ್ ಸ್ಮಡ್ಜಾ ಅವರು ಮಾತನಾಡಿ, ಭಾರತವು ಯಾವಾಗಲೂ ನನಗೆ ಉತ್ತಮ ಉದ್ಯಮಶೀಲ ಭರವಸೆಯ ದೇಶವಾಗಿದೆ. 4ನೇ ಕೈಗಾರಿಕಾ ವಿಕಾಸವು ಪ್ರಾರಂಭವಾದಂತೆ, ಭಾರತವು ವಿಶೇಷವಾಗಿ ತನಗೆ ಮತ್ತು ಜಗತ್ತಿಗೆ ಪರಿಹಾರಗಳನ್ನು ಆವಿಷ್ಕರಿಸುವ ಸಾಮರ್ಥ್ಯದೊಂದಿಗೆ ವೇಗವರ್ಧಕದ ಪಾತ್ರವನ್ನು ವಹಿಸುತ್ತದೆ ಎಂದು ಒಪ್ಪಿಕೊಳ್ಳುವುದು ಸೂಕ್ತವಾಗಿದೆ. ಭಾರತವು ಈಗ ವಿಶ್ವದ ಮೂರನೇ ಅತಿದೊಡ್ಡ ಸ್ಟಾರ್ಟ್- ಅಪ್ ಪರಿಸರ ವ್ಯವಸ್ಥೆಯನ್ನು ಹೊಂದಿದೆ. ಇದರ ಪರಿಣಾಮವಾಗಿ, ಇಂಡಿಯಾ ಗ್ಲೋಬಲ್ ಇನ್ನೋವೇಶನ್ ಕನೆಕ್ಟ್ ಭಾರತದ ಸ್ಟಾರ್ಟ್- ಅಪ್ ಮತ್ತು ಅನುಶೋಧನೆಯ ಕಥೆಯು ಹೇಗೆ ಜಾಗತಿಕವಾಗುತ್ತಿದೆ ಎಂಬುದರ ಸಾಮರ್ಥ್ಯವನ್ನು ಇದು ಎತ್ತಿ ತೋರಿಸುತ್ತದೆ. ಪ್ರಪಂಚದ ಹೊಸ ಸಿಲಿಕಾನ್ ವ್ಯಾಲಿಯಾಗಿ ಹೊರಹೊಮ್ಮುವುದು ಉತ್ತಮ, ಸುರಕ್ಷಿತ ಮತ್ತು ಬಲವಾದ ನಾಳೆಗೆ ಕಾರಣವಾಗುತ್ತದೆ ಎಂದು ಹೇಳಿದರು.

ಬೆಂಗಳೂರಿನ ಹೋಟೆಲ್ ಕಾನ್ರಾಡ್‌ನಲ್ಲಿ ನಡೆಯುತ್ತಿರುವ 2 ದಿನಗಳ ಈ ಸಮ್ಮೇಳನದಲ್ಲಿ ಭಾರತ ಮತ್ತು ಸಿಂಗಾಪುರ, ಇಸ್ರೇಲ್, ಸ್ವಿಡ್ಜರ್ಲೆಂಡ್, ಅಮೆರಿಕ, ಜಪಾನ್, ಕೊರಿಯಾ ಮತ್ತು ಜರ್ಮನಿಯಂತಹ ದೇಶಗಳಿಂದ ಆಗಮಿಸಿದ 100 ಕ್ಕೂ ಹೆಚ್ಚು ಭಾಷಣಕಾರರು ಭಾಗವಹಿಸುತ್ತಿದ್ದಾರೆ.

22 ಅಧಿವೇಶನಗಳಲ್ಲಿ ಪ್ಯಾನೆಲಿಸ್ಟ್ ಗಳು ತಾಂತ್ರಿಕ ಪಾಲುದಾರಿಕೆಗಳು, ಗ್ರೀನ್‌ಟೆಕ್, ಫಿನ್‌ಟೆಕ್, ಡೀಪ್‌ಟೆಕ್, ಎಡ್‌ಟೆಕ್, ವೆಬ್ 3.0, ಸೂಪರ್ ಆಯಪ್‌ಗಳು ಮತ್ತು ಯುನಿಕಾರ್ನ್ ಗ್ರೋತ್ ಕಥೆಗಳು ಮತ್ತು ಪಾಲುದಾರಿಕೆಗಳ ಕುರಿತು ವಿಚಾರಗಳನ್ನು ಕೇಂದ್ರೀಕರಿಸುತ್ತಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು