ಬೆಂಗಳೂರು: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ನಿಧನರಾದ ಹಿನ್ನೆಲೆಯಲ್ಲಿ ಕರ್ನಾಟಕ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಆ.31ಕ್ಕೆ ಮುಂದೂಡಲಾಗಿದೆ ಎಂದು ರಾಜ್ಯ ಚುನಾವಣಾ ಆಯೋಗವು ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
ಆ.29ಕ್ಕೆ ನಡೆಯಬೇಕಾಗಿದ್ದ ಚುನಾವಣೆಯನ್ನು ಎರಡು ದಿನ ಮುಂದೂಡಿ ಆ.31ಕ್ಕೆ ನಡೆಸಲಾಗುವುದು. ಆ.18ರಂದು ನಾಮಪತ್ರ ಸಲ್ಲಿಸಲು ಕೊನೇ ದಿನ. ಆ.20 ನಾಮಪತ್ರ ಪರಿಶೀಲನೆಗೆ ಕೊನೇ ದಿನ. ಉಮೇದುವಾರಿಕೆ ಹಿಂಪಡೆಯಲು ಆ.23 ಕೊನೇ ದಿನ. ಆ.31ರಂದು ಮತದಾನ ಅಗತ್ಯಬಿದ್ದರೆ ಸೆ. 2ರಂದು ಮರುಮತದಾನ, ಸೆ.3ರಂದು ಮತ ಎಣಿಕೆ ನಡೆಯಲಿದೆ ಎಂದು ಚುನಾವಣಾ ಆಯೋಗವು ಪ್ರಕಟಣೆಯಲ್ಲಿ ಹೇಳಿದೆ.
ತುಮಕೂರು, ಮೈಸೂರು ಮತ್ತು ಶಿವಮೊಗ್ಗದ ಮಹಾನಗರ ಪಾಲಿಕೆ ಚುನಾವಣಾ ದಿನಾಂಕಗಳಲ್ಲಿ ಯಾವುದೇ ವ್ಯತ್ಯಾಸವಿಲ್ಲವೆಂದು ಆಯೋಗವು ಹೇಳಿವೆ.