News Karnataka Kannada
Monday, April 29 2024
ಬೆಂಗಳೂರು ನಗರ

ಹಲಗೂರು: ಬೈಕಿಗೆ ಹಾಲಿನ ಟ್ಯಾಂಕರ್ ಡಿಕ್ಕಿ, ಯುವಕ ಸ್ಥಳದಲ್ಲೇ ಸಾವು

Woman killed in accident, son Ashwin and husband critically injured
Photo Credit :

ಹಲಗೂರು: ಸಮೀಪದ ಚಿಲ್ಲಾಪುರದ ಗೇಟ್ ರಾಷ್ಟ್ರೀಯ ಹೆದ್ದಾರಿ ಬೈಪಾಸ್ ರಸ್ತೆಯಲ್ಲಿ ಗುರುವಾರ ರಾತ್ರಿ 11 ಗಂಟೆಯ ಸಮಯದಲ್ಲಿ ಬೈಕಿಗೆ ಹಾಲಿನ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಪುಟ್ಟರಾಜು(27) ಸ್ಥಳದಲ್ಲೇ ಮೃತಪಟ್ಟಿರುತ್ತಾರೆ.

ಮೂಲತಃ ತಲಕಾಡು ಗ್ರಾಮದ ವಾಸಿ ಮಾದೇಶರವರ ಮಗನಾದ ಪುಟ್ಟರಾಜ ಅಲಿಯಾಸ್ ಪುಟ್ಟ ಇವರು ಬೆಂಗಳೂರಿನಲ್ಲಿ ಖಾಸಿಗೆ ಕಂಪನಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು ಗುರುವಾರ ಸ್ವಗ್ರಾಮವಾದ ತಲಕಾಡಿಗೆ ಹೋಗುತ್ತಿದ್ದಾಗ ಚಿಲ್ಲಾಪುರದ ಗೇಟ್ ಹಲಗೂರು ಬೈಪಾಸ್ ರಸ್ತೆಯಲ್ಲಿ ಮಳವಳ್ಳಿ ಕಡೆಯಿಂದ ಹಲಗೂರಿಗೆ ಬರುತ್ತಿದ್ದ ಹಾಲಿನ ಟ್ಯಾಂರ್ಕ ವಾಹನ ಎದುರುಗಡೆಯಿಂದ ಬಂದ ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಪುಟ್ಟರಾಜು ತೀವ್ರವಾಗಿ ಗಾಯಗೊಂಡು ಮೃತಪಟ್ಟಿರುತ್ತಾನೆ.

ಶುಕ್ರವಾರ ಮಳವಳ್ಳಿ ಸರ್ಕಾರಿ ಆಸ್ಪತ್ರೆಯಲ್ಲಿ ವ್ಯೆದ್ಯಕೀಯ ಪರೀಕ್ಷೆ ನಡೆಸಿದ ನಂತರ ವಾರಸುದಾರರಿಗೆ ಶವವನ್ನು ನೀಡಲಾಯಿತು. ಹಲಗೂರು ಠಾಣೆ ಸಬ್ಇನ್ಸ್‌ಪೆ ಕ್ಟರ್ ರವಿಕುಮಾರ್ ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಕೈಗೊಂಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು