ಬೆಂಗಳೂರು : ನಗರ ಪೊಲೀಸ್ ಪೂರ್ವ ವಿಭಾಗದ ಹಲಸೂರು ಠಾಣಾ ವ್ಯಾಪ್ತಿಯಲ್ಲಿ ಏ.24ರಂದು ಧಾರ್ಮಿಕ ಕಾರ್ಯಕ್ರಮ ಜರುಗುವ ಹಿನ್ನೆಲೆಯಲ್ಲಿ ಬೆಳಗ್ಗೆ 8 ರಿಂದ ಸಂಜೆ 5 ಗಂಟೆವರೆಗೆ ಮದ್ಯ ಮಾರಾಟ ನಿಷೇಧಿಸಿ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶಿಸಿದ್ದಾರೆ.
ಏ.24ರಂದು ಹಲಸೂರಿನ ಸೋಮೇಶ್ವರ, ಕಾಮಾಕ್ಷಮ್ಮ ಪಲ್ಲಕಿ ಉತ್ಸವ ನಡೆಯಲಿದೆ. ನಗರದ ವಿವಿಧ ಭಾಗಗಳಿಂದ 30-40 ಸಾವಿರ ಭಕ್ತರು ಬರುವ ನಿರೀಕ್ಷೆ ಇದೆ. ಈ ವೇಳೆ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಹಲಸೂರು ಠಾಣೆ ವ್ಯಾಪ್ತಿಯ ಮದ್ಯದಂಗಡಿ, ಬಾರ್ ಆಯಂಡ್ ರೆಸ್ಟೋರೆಂಟ್, ವೈನ್ಶಾಪ್ನಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.