ಹಲಾಲ್ ವಿವಾದಕ್ಕೆ ಸಂಬಂಧಿಸಿ ಜಾಗೃತಿ ಮೂಡಿಸುತ್ತಿರುವ ಹಿಂದು ಸಂಘಟನೆಗಳನ್ನು ಮುಖ್ಯಮಂತ್ರಿ ಬೊಮ್ಮಾಯಿ ಗಂಡಸ್ತನ ಇದ್ದರೆ ಮೊದಲು ನಿಯಂತ್ರಿಸಲಿ ಎಂಬ ಕುಮಾರಸ್ವಾಮಿ ಅವರ ವಿವಾದಾತ್ಮಕ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ಕುಮಾರಣ್ಣ ಬಹಳ ಹಿರಿಯರಿದ್ದಾರೆ. ಈ ಬಗ್ಗೆ ಉತ್ತರ ನೀಡುವುದಿಲ್ಲ ಎಂದು ಹೇಳಿದರು.
‘ಕುಮಾರಣ್ಣ ಬಹಳ ಹಿರಿಯರಿದ್ದಾರೆ. ಸಚಿವ ಅಶ್ವಥ್ ನಾರಾಯಣ್ ಅವರು ಗಂಡಸ್ತನದ ಬಗ್ಗೆ ಮಾತನಾಡುತ್ತಾರೊ, ಬೇರೆಯವರು ಮಾತನಾಡುತ್ತಾರೋ ಆ ಬಗ್ಗೆ ಉತ್ತರ ನೀಡುವುದಿಲ್ಲ.
ಸದ್ಯ ನಾವು ಪಕ್ಷದ ಸದಸ್ಯತ್ವ ನೋಂದಣಿ ಮಾಡಿಸುತ್ತಿದ್ದು, ಇಂದು ಕಡೆಯ ದಿನವಾಗಿದೆ. ಕಾರ್ಯಕರ್ತರು ಸಕ್ರಿಯವಾಗಿ ಭಾಗವಹಿಸುವಂತೆ ನೋಡಿಕೊಳ್ಳುತ್ತಿದ್ದೇವೆ. ಇಂತಹ ವಿಚಾರಗಳಿಗೆ ಜನ ಉತ್ತರ ನೀಡುತ್ತಾರ’ ಎಂದರು.
ಹಲಾಲ್ ವಿಚಾರವಾಗಿ ಮುಖ್ಯಮಂತ್ರಿಗಳಿಗೆ ಗಂಡಸ್ತನ ಇಲ್ಲ, ಕಾಂಗ್ರೆಸ್ ಗೆ ತಾಖತ್ತಿಲ್ಲ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಅವರು ಚನ್ನಪಟ್ಟಣದಲ್ಲಿ ಹೇಳಿಕೆ ನೀಡಿದ್ದರು.