ಬೆಂಗಳೂರು: ಬಿಜೆಪಿ ಟಿಕೆಟ್ ಸಿಗದೆ ಕೈ ಹಿಡಿಯಲು ಮುಂದಾಗಿರುವ ಮಾಜಿ ಸಚಿವ ಹರತಾಳು ಹಾಲಪ್ಪ ಕಾಂಗ್ರೆಸ್ ಸೇರ್ಪಡೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಒಪ್ಪಿಗೆ ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.
ಅನೇಕ ಬಿಜೆಪಿ ಮುಖಂಡರು ನನ್ನೊಂದಿಗೆ ಸಂಪರ್ಕದಲ್ಲಿದ್ದಾರೆ. ಈ ಕುರಿತು ಹೈಕಮಾಂಡ್ ಜತೆಗೆ ಮಾತನಾಡಿ ಬಳಿಕ ನಿರ್ಧಾರ ತೆಗೆದುಕೊಳ್ಳುವುದಾಗಿ ಸಿದ್ದರಾಮಯ್ಯ ತಿಳಿಸಿದರು.
ಹಾಲಪ್ಪ ಮೇಲಿದ್ದ ಕ್ರಿಮಿನಲ್ ಮೊಕದ್ದಮೆ ಖುಲಾಸೆ ಆಗಿದೆ. ಈಗ ಅವರು ಆರೋಪ ಮುಕ್ತರಾಗಿರುವ ಕಾರಣದಿಂದಾಗಿ ಅವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಲು ನಿರ್ಧರಿಸಿದ್ದೇವೆ. ಅವರು ಹಿಂದುಳಿದ ನಾಯಕ ಮತ್ತು ನಮ್ಮ ಸಿದ್ಧಾಂತ ಒಂದೇ ರೀತಿಯಾಗಿದೆ ಎಂದರು.