News Karnataka Kannada
Monday, April 29 2024
ಬೆಂಗಳೂರು ನಗರ

ಹಿಜಾಬ್​ಗೆ ಸಂಬಂಧಪಟ್ಟಂತೆ ನ್ಯಾಯಾಲಯದ ಆದೇಶದ ನಿರೀಕ್ಷೆಯಲ್ಲಿದ್ದೇವೆ: ಸಚಿವ ವಿ. ಸುನೀಲ್​ ಕುಮಾರ್​

Sunil Kumar
Photo Credit :

ಬೆಂಗಳೂರು: ಹಿಜಾಬ್​ಗೆ ಸಂಬಂಧಪಟ್ಟಂತೆ ನ್ಯಾಯಾಲಯದ ಆದೇಶದ ನಿರೀಕ್ಷೆಯಲ್ಲಿದ್ದೇವೆ,ಸಮವಸ್ತ್ರ ಸಂಹಿತೆ ಎಲ್ಲರೂ ಪಾಲಿಸಲೇಬೇಕು ಎಂದು ಇಂಧನ ಸಚಿವ ವಿ. ಸುನೀಲ್​ ಕುಮಾರ್​ ತಿಳಿಸಿದರು.

ಯಾವತ್ತೂ ನಾವು ನೆಲದ ಕಾನೂನು ಗೌರವಿಸುತ್ತೇವೆ. ನ್ಯಾಯಾಲಯದ ತೀರ್ಪುನ್ನು ಎಲ್ಲರೂ ಗೌರವಿಸಬೇಕು. ಕಾಯ್ದೆಯನ್ನು ಅನುಷ್ಟಾನಕ್ಕೆ ತರುವ ಕೆಲಸವಾಗಬೇಕು.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ದ್ವೇಷದ ಬೆಂಕಿ ಹಚ್ಚುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ. ದೇಶ ವಿಭಜನೆಗೆ ಕಾಂಗ್ರೆಸ್ ಬೆಂಬಲಿಸುತ್ತದೆ.

ಯಾರು ಪ್ರತ್ಯೇಕವಾಗಿ ಇರಬೇಕು ಅಂತ ಬಯಸುತ್ತಿದ್ದಾರೋ ಅವರನ್ನು ಕಾಂಗ್ರೆಸ್ ಬೆಂಬಲಿಸುತ್ತಿದೆ ಎಂದು ಆರೋಪಿಸಿದರು.

ಎಸ್​ಡಿಪಿಐ ಒಂದು ರಾಜಕೀಯ ಪಾರ್ಟಿ. ಅದನ್ನು ಬ್ಯಾನ್ ಮಾಡುವುದಕ್ಕೆ ಏನೇನು ಪ್ರಕ್ರಿಯೆಗಳಿವೆ ಎಂಬುದು ನಿಮಗೆ ( ಮಾಧ್ಯಮದವರು) ಗೊತ್ತಿದೆ. ಮಂಗಳೂರಲ್ಲಿ ಪಿಎಫ್‌ಐ, ಎಸ್ಡಿಪಿಐ ಜತೆ ಒಳ ಒಪ್ಪಂದ ಮಾಡಿಕೊಂಡವರು ಕಾಂಗ್ರೆಸ್​ನವರೇ ಎಂದು ಆರೋಪ ಮಾಡಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು