ಬೆಂಗಳೂರು: ಹಿಜಾಬ್ಗೆ ಸಂಬಂಧಪಟ್ಟಂತೆ ನ್ಯಾಯಾಲಯದ ಆದೇಶದ ನಿರೀಕ್ಷೆಯಲ್ಲಿದ್ದೇವೆ,ಸಮವಸ್ತ್ರ ಸಂಹಿತೆ ಎಲ್ಲರೂ ಪಾಲಿಸಲೇಬೇಕು ಎಂದು ಇಂಧನ ಸಚಿವ ವಿ. ಸುನೀಲ್ ಕುಮಾರ್ ತಿಳಿಸಿದರು.
ಯಾವತ್ತೂ ನಾವು ನೆಲದ ಕಾನೂನು ಗೌರವಿಸುತ್ತೇವೆ. ನ್ಯಾಯಾಲಯದ ತೀರ್ಪುನ್ನು ಎಲ್ಲರೂ ಗೌರವಿಸಬೇಕು. ಕಾಯ್ದೆಯನ್ನು ಅನುಷ್ಟಾನಕ್ಕೆ ತರುವ ಕೆಲಸವಾಗಬೇಕು.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ದ್ವೇಷದ ಬೆಂಕಿ ಹಚ್ಚುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ. ದೇಶ ವಿಭಜನೆಗೆ ಕಾಂಗ್ರೆಸ್ ಬೆಂಬಲಿಸುತ್ತದೆ.
ಯಾರು ಪ್ರತ್ಯೇಕವಾಗಿ ಇರಬೇಕು ಅಂತ ಬಯಸುತ್ತಿದ್ದಾರೋ ಅವರನ್ನು ಕಾಂಗ್ರೆಸ್ ಬೆಂಬಲಿಸುತ್ತಿದೆ ಎಂದು ಆರೋಪಿಸಿದರು.
ಎಸ್ಡಿಪಿಐ ಒಂದು ರಾಜಕೀಯ ಪಾರ್ಟಿ. ಅದನ್ನು ಬ್ಯಾನ್ ಮಾಡುವುದಕ್ಕೆ ಏನೇನು ಪ್ರಕ್ರಿಯೆಗಳಿವೆ ಎಂಬುದು ನಿಮಗೆ ( ಮಾಧ್ಯಮದವರು) ಗೊತ್ತಿದೆ. ಮಂಗಳೂರಲ್ಲಿ ಪಿಎಫ್ಐ, ಎಸ್ಡಿಪಿಐ ಜತೆ ಒಳ ಒಪ್ಪಂದ ಮಾಡಿಕೊಂಡವರು ಕಾಂಗ್ರೆಸ್ನವರೇ ಎಂದು ಆರೋಪ ಮಾಡಿದರು.