ಬೆಂಗಳೂರು : ರಾಜ್ಯದಲ್ಲಿ ಹಿಜಾಬ್, ಕೇಸರಿ ಶಾಲು ವಿವಾದದ ಕುರಿತಂತೆ ಕೋರ್ಟ್ ಆದೇಶವನ್ನು ಎಲ್ಲರೂ ಗೌರವಿಸಬೇಕು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಹಿಜಾಬ್ ವಿವಾದದಕ್ಕೆ ಸಂಬಂಧಿಸಿದಂತೆ ಎಲ್ಲರೂ ಕೋರ್ಟ್ ಆದೇಶವನ್ನು ಗೌರವಿಸಬೇಕು.ಅಂತಿಮ ಆದೇಶ ಬರುವವರೆಗೆ ಸಂಯಮದಿಂದ ಇರಬೇಕು ಎಂದು ಹೇಳಿದ್ದಾರೆ.
ಇಂದಿನಿಂದ ಪಿಯು, ಪದವಿ, ಇಂಜಿನಿಯರಿಂಗ್ ಹಾಗೂ ಪಾಲಿಟೆಕ್ನಿಕ್ ಕಾಲೇಜುಗಳು ಪುನರಾರಂಭಗೊಂಡಿವೆ. ಆದ್ರೇ ಹಿಜಾಬ್ ಸಂಘರ್ಷ ಮಾತ್ರ ಮುಂದುವರೆದಿದೆ. ಕಾಲೇಜು ಆರಂಭಗೊಳ್ಳುತ್ತಿದ್ದಂತೆ ಇಂದು ಹಿಜಾಬ್ ಧರಿಸಿಯೇ ವಿದ್ಯಾರ್ಥಿನಿಯರು ಕಾಲೇಜಿಗೆ ಆಗಮಿಸಿದ್ದಾರೆ. ಅಲ್ಲದೇ ತರಗತಿಯಲ್ಲಿ ಕುಳಿತು ಹಿಜಾಬ್ ತೆಗೆಯೋದಿಲ್ಲ ಎಂಬುದಾಗಿಯೂ ಪ್ರಾಂಶುಪಾಲರೊಂದಿಗೆ ವಾಗ್ವಾದಕ್ಕೂ ಇಳಿದಿದ್ದಾರೆ.