ರಾಜ್ಯದಲ್ಲಿ ಹಿಜಾಬ್ ಸಂಘರ್ಷ ತಾರಕಕ್ಕೇರಿ, ಇದೀಗ ತಣ್ಣಗಾಗಿದೆ. ಆರಂಭದಲ್ಲಿ ಆರು ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಬಂದಾಗಲೇ ಸಮಸ್ಯೆ ಬಗೆಹರಿಸಬಹುದಿತ್ತು. ಆಗ ಈ ಪ್ರಕರಣ ಇಷ್ಟು ದೊಡ್ಡದಾಗುತ್ತಿರಲಿಲ್ಲ ಎಂದು ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.
ಆರಂಭದಲ್ಲೇ ಇದನ್ನು ನಿಲ್ಲಿಸಬಹುದಿತ್ತು. ಶಾಂತಿಯುತವಾಗಿ ಬಗೆಹರಿಸಿಕೊಳ್ಳಬಹುದಿತ್ತು ಎನ್ನುವುದು ನನ್ನ ಅಭಿಪ್ರಾಯ. ಕಾಂಗ್ರೆಸ್ ಇದನ್ನು ರಾಜಕೀಯವಾಗಿ ತನ್ನ ಅನುಕೂಲಕ್ಕೆ ತಕ್ಕಂತೆ ಬಳಸಿಕೊಳ್ಳುತ್ತಿದೆ ಎಂದು ಈಶ್ವರಪ್ಪ ಹೇಳಿದ್ದಾರೆ.
ಈ ರೀತಿ ಸಮಸ್ಯೆಗಳನ್ನು ಸೂಕ್ಷ್ಮ ರೀತಿಯಲ್ಲಿ ಬಗೆಹರಿಸಬೇಕಾಗುತ್ತದೆ. ಸಮವಸ್ತ್ರದ ಮಹತ್ವದ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಬೇಕಿತ್ತು. ಅದನ್ನು ಮಾಡಲು ಸಾಧ್ಯವಾಗಿಲ್ಲ. ಇದನ್ನೇ ಕೆಲವರು ಲಾಭದ ಅಂಶ ಮಾಡಿಕೊಂಡರು ಎಂದಿದ್ದಾರೆ.